<p><strong>ತುಮ್ಮಿನಕಟ್ಟಿ:</strong>ಸರ್ಕಾರಿ ಜಾಗ ಎನ್ನಲಾಗುತ್ತಿರುವ 37 ಗುಂಟೆ ಜಾಗವನ್ನು ಗ್ರಾಮದ ಸಿದ್ದರಾಮಪ್ಪ ಸದಾಶಿವಪ್ಪ ಹೊಸಮನಿ ಕುಟುಂಬ ಒತ್ತುವರಿ ಮಾಡಿಕೊಂಡಿದೆ ಎಂದು ಆರೋಪಿಸಿ, ಗ್ರಾಮ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ಗುರುವಾರ ತೆರವು ಕಾರ್ಯ ಕೈಗೊಂಡು ಜಾಗವನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಗ್ರಾಮ ಪಂಚಾಯ್ತಿಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡು ಕೃಷಿ ಚಟುವಟಿಕೆ ಕೈಗೊಂಡಿದ್ದರು. ಪಂಚಾಯ್ತಿ ವತಿಯಿಂದ 6 ತಿಂಗಳಲ್ಲಿ 3 ಬಾರಿ ಸರ್ವೆ ಮಾಡಿಸಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಒತ್ತುವರಿದಾರರು ಜಾಗ ಬಿಟ್ಟು ಕೊಡಲು ನಿರಾಕರಿಸಿದ್ದರು’ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ ಹೇಳಿದರು.</p>.<p>ನೀವು ಬೇರೆ ಜಾಗ ಬಳಸಿಕೊಳ್ಳಿ ಎಂದು ಒತ್ತುವರಿ ತೆರವು ಕಾರ್ಯಕ್ಕೆ ಹೊಸಮನಿ ಕುಟುಂಬಸ್ಥರು ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರ ನೆರವು ಪಡೆದು ಜೆಸಿಬಿ ಬಳಸಿ ಒತ್ತುವರಿಯಾದ ಜಾಗವನ್ನು ಮರಳಿ ಪಡೆಯಲಾಗಿದೆ ಎಂದರು.</p>.<p>ಉದ್ದೇಶಿತ ಜಾಗದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ₹60 ಲಕ್ಷ ವೆಚ್ಚದಲ್ಲಿ ಮಂಜೂರಾದ ‘ಮಲ ಕೆಸರು ತ್ಯಾಜ್ಯ ನಿರ್ವಹಣಾ ಘಟಕ’ ನಿರ್ಮಿಸಲಾಗುವುದು. ಇದೊಂದು ವಿನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>ಭತ್ತದ ಬೆಳೆ ನಾಶ:</strong> ‘ಭತ್ತದ ಪಸಲು ಕಟಾವಿಗೆ ಬಂದಿತ್ತು. ಕಟಾವಿಗೆ ಕೆಲವು ದಿನಗಳ ಕಾಲಾವಕಾಶ ಕೊಡಿ ಎಂದು ಕೇಳಿದರೂ ಅವಕಾಶ ನೀಡದೆ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಪೊಲೀಸರು ಒಟ್ಟಾಗಿ ಜೆಸಿಬಿಯಿಂದ ಕಾಲುವೆ ತೆಗೆದು ಒಂದು ಎಕರೆ ಭತ್ತ ನಷ್ಟವಾಗುವಂತೆ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಈ ಜಾಗದಲ್ಲಿ ನಾವು ಕೃಷಿ ಚಟುವಟಿಕೆ ನಡೆಸುತ್ತಿದ್ದೇವೆ’ ಎಂದು ಒತ್ತುವರಿದಾರರು ಎನ್ನಲಾದ ಸಿದ್ದರಾಮಪ್ಪ ಹೊಸಮನಿ ದೂರಿದ್ದಾರೆ.</p>.<p>ಸ್ಥಳದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ತಾಲ್ಲೂಕು, ಜಿಲ್ಲಾ ಹಂತದ ಅಧಿಕಾರಿಗಳು ಹಾಗೂ ಪೊಲೀಸರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮ್ಮಿನಕಟ್ಟಿ:</strong>ಸರ್ಕಾರಿ ಜಾಗ ಎನ್ನಲಾಗುತ್ತಿರುವ 37 ಗುಂಟೆ ಜಾಗವನ್ನು ಗ್ರಾಮದ ಸಿದ್ದರಾಮಪ್ಪ ಸದಾಶಿವಪ್ಪ ಹೊಸಮನಿ ಕುಟುಂಬ ಒತ್ತುವರಿ ಮಾಡಿಕೊಂಡಿದೆ ಎಂದು ಆರೋಪಿಸಿ, ಗ್ರಾಮ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ಗುರುವಾರ ತೆರವು ಕಾರ್ಯ ಕೈಗೊಂಡು ಜಾಗವನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಗ್ರಾಮ ಪಂಚಾಯ್ತಿಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡು ಕೃಷಿ ಚಟುವಟಿಕೆ ಕೈಗೊಂಡಿದ್ದರು. ಪಂಚಾಯ್ತಿ ವತಿಯಿಂದ 6 ತಿಂಗಳಲ್ಲಿ 3 ಬಾರಿ ಸರ್ವೆ ಮಾಡಿಸಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಒತ್ತುವರಿದಾರರು ಜಾಗ ಬಿಟ್ಟು ಕೊಡಲು ನಿರಾಕರಿಸಿದ್ದರು’ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ ಹೇಳಿದರು.</p>.<p>ನೀವು ಬೇರೆ ಜಾಗ ಬಳಸಿಕೊಳ್ಳಿ ಎಂದು ಒತ್ತುವರಿ ತೆರವು ಕಾರ್ಯಕ್ಕೆ ಹೊಸಮನಿ ಕುಟುಂಬಸ್ಥರು ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರ ನೆರವು ಪಡೆದು ಜೆಸಿಬಿ ಬಳಸಿ ಒತ್ತುವರಿಯಾದ ಜಾಗವನ್ನು ಮರಳಿ ಪಡೆಯಲಾಗಿದೆ ಎಂದರು.</p>.<p>ಉದ್ದೇಶಿತ ಜಾಗದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ₹60 ಲಕ್ಷ ವೆಚ್ಚದಲ್ಲಿ ಮಂಜೂರಾದ ‘ಮಲ ಕೆಸರು ತ್ಯಾಜ್ಯ ನಿರ್ವಹಣಾ ಘಟಕ’ ನಿರ್ಮಿಸಲಾಗುವುದು. ಇದೊಂದು ವಿನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p><strong>ಭತ್ತದ ಬೆಳೆ ನಾಶ:</strong> ‘ಭತ್ತದ ಪಸಲು ಕಟಾವಿಗೆ ಬಂದಿತ್ತು. ಕಟಾವಿಗೆ ಕೆಲವು ದಿನಗಳ ಕಾಲಾವಕಾಶ ಕೊಡಿ ಎಂದು ಕೇಳಿದರೂ ಅವಕಾಶ ನೀಡದೆ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಪೊಲೀಸರು ಒಟ್ಟಾಗಿ ಜೆಸಿಬಿಯಿಂದ ಕಾಲುವೆ ತೆಗೆದು ಒಂದು ಎಕರೆ ಭತ್ತ ನಷ್ಟವಾಗುವಂತೆ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಈ ಜಾಗದಲ್ಲಿ ನಾವು ಕೃಷಿ ಚಟುವಟಿಕೆ ನಡೆಸುತ್ತಿದ್ದೇವೆ’ ಎಂದು ಒತ್ತುವರಿದಾರರು ಎನ್ನಲಾದ ಸಿದ್ದರಾಮಪ್ಪ ಹೊಸಮನಿ ದೂರಿದ್ದಾರೆ.</p>.<p>ಸ್ಥಳದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ತಾಲ್ಲೂಕು, ಜಿಲ್ಲಾ ಹಂತದ ಅಧಿಕಾರಿಗಳು ಹಾಗೂ ಪೊಲೀಸರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>