ನದಿಯಿಂದ ಮರಳನ್ನು ತೆಗೆದು ಸಂಗ್ರಹ ಕೇಂದ್ರದಲ್ಲಿ ಸಂಗ್ರಹಿಸಿ ಅಲ್ಲಿಂದ ಮಾರಾಟ ಮಾಡಬೇಕೆಂದು ಸರ್ಕಾರ ಆದೇಶವಿದೆ. ನದಿಯಲ್ಲಿ ಯಾವುದೇ ಕಾರಣಕ್ಕೂ ಜೆಸಿಬಿ ಮತ್ತು ಹಿಟ್ಯಾಚಿ ಯಂತ್ರೋಪಕರಣ ಬಳಕೆ ಮಾಡಬಾರದು ಎನ್ನುವ ಸರ್ಕಾರ ಮತ್ತು ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶವಿದ್ದರೂ ಮರಳು ಗಣಿಗಾರಿಕೆ ನಡೆಸುವವರು ಈ ಆದೇಶವನ್ನು ಗಾಳಿಗೆ ತೂರಿ ಮನಬಂದತೆ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ.