ಒಂದು ಕಡೆ ಬೆಲೆ ಕುಸಿತ, ಮತ್ತೊಂದು ಕಡೆ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ರೈತರ ಬದುಕು ತುತ್ತಾಗಿದೆ. ಇಂಥ ಸಂಕಷ್ಟದಲ್ಲೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ತುಂಗಭದ್ರಾ ನದಿ ತೀರದ ಜಮೀನುಗಳಲ್ಲಿ ಬೆಳೆದಂತಹ ಸೇವಂತಿಗೆ, ಬೆಳ್ಳುಳ್ಳಿ, ಮೆಕ್ಕೆಜೋಳ, ತರಕಾರಿ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳಿಗೆ ಹಾನಿಯಾಗಿದೆ. ನೂರಾರು ಎಕರೆ ಕಬ್ಬು, ಭತ್ತ, ಬಾಳೆ, ತೆಂಗು, ಅಡಿಕೆ ಬೆಳೆಗಳು ಜಲಾವೃತಗೊಂಡಿವೆ.ನೆರೆಹಾವಳಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಬೆಲೆ ಮಾದರಿಯಲ್ಲಿ ಬೆಳೆ ನಷ್ಟ ಪರಿಹಾರ ಕೊಡಬೇಕು. ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ತಿಳಿಸಿದರು.