ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರಲು 20 ಮಂದಿ ಶಾಸಕರು ಸಿದ್ಧರಿದ್ದಾರೆ: ಲಕ್ಷ್ಮಣ ಸವದಿ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ
Last Updated 29 ಮೇ 2020, 14:54 IST
ಅಕ್ಷರ ಗಾತ್ರ

ಹಾವೇರಿ: ‘ಬೇರೆ ಪಕ್ಷದಿಂದ 15-20 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಅವರನ್ನು ಬಿಜೆಪಿಗೆತೆಗೆದುಕೊಳ್ಳಬೇಕೋ ಬೇಡವೋ ಎಂಬುದನ್ನು ನಮ್ಮ ಹೈಕಮಾಂಡ್‌ ತೀರ್ಮಾನಿಸಲಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೆ ವರ್ಚಸ್ಸು ಇರುವುದಕ್ಕೆ ಬೇರೆ ಪಕ್ಷದಿಂದ ಬರಲು ಶಾಸಕರು ಸಿದ್ಧವಿದ್ದಾರೆ. ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇಲ್ಲ. ನಮ್ಮವರು ಪಕ್ಷ ನಿಷ್ಠೆಯನ್ನು ಹೊಂದಿದ್ದಾರೆ ಎಂದು ಭಿನ್ನಮತದ ಬಗ್ಗೆ ಸಮಜಾಯಿಷಿ ನೀಡಿದರು.

ಶಾಸಕರ ರಹಸ್ಯ ಸಭೆ ಬಗ್ಗೆ ಈಗಾಗಲೇ ಉಮೇಶ ಕತ್ತಿ ಸ್ಪಷ್ಟನೆ ನೀಡಿದ್ದಾರೆ.ಉತ್ತರ ಕರ್ನಾಟಕದ ಅನೇಕ ಶಾಸಕರು ಊಟಕ್ಕಾಗಿ ಒಂದೆಡೆ ಸೇರಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲ ಶಾಸಕರು ಸಿ.ಎಂ.ಯಡಿಯೂರಪ್ಪ ನಾಯಕತ್ವದಲ್ಲಿ ಒಟ್ಟಾಗಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT