<p><strong>ಹಾವೇರಿ:</strong> ‘ಉಡುಪಿ ಪ್ರಕರಣದಲ್ಲಿ ತನಿಖೆಗೂ ಮುಂಚೆಯೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಪೊಲೀಸರು ಪ್ರಕರಣ ಮುಚ್ಚಿ ಹಾಕುವ ಶಂಕೆ ಇದೆ. ಹೆಣ್ಣು ಮಕ್ಕಳ ಗೌರವದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. </p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಅಲ್ಲಿ ವಿಡಿಯೊ ರೆಕಾರ್ಡ್ ಮಾಡಿಲ್ಲ ಅಂದರೆ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಏಕೆ ಸಸ್ಪೆಂಡ್ ಮಾಡಿದೆ? ತಪ್ಪೊಪ್ಪಿಗೆ ಪತ್ರವನ್ನು ಏಕೆ ಬರೆಯಿಸಿಕೊಂಡರು? ಇದು ಕಾಲೇಜಿನಲ್ಲಿ ಮುಗಿದು ಹೋದ ಪ್ರಕರಣ ಅಲ್ಲ, ಮುಚ್ಚಿಹೋದ ಪ್ರಕರಣ’ ಎಂದು ಆರೋಪಿಸಿದರು. </p>.<p><strong>ದಂಗೆಕೋರರ ರಕ್ಷಣೆ:</strong></p>.<p>‘ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣವೇ ಬೇರೆ. ಕನ್ನಡ ಸಂಘಟನೆಗಳ ಪ್ರಕರಣವೇ ಬೇರೆ. ಪೊಲೀಸ್ ಠಾಣೆಗಳಿಗೆ ಕಲ್ಲು ಹೊಡೆದು ಬೆಂಕಿ ಹಚ್ಚಿದ ದಂಗೆಕೋರರನ್ನು ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡಲು ಹೊರಟಿದೆ. ಈ ಗಲಭೆ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು’ ಎಂದು ಬೊಮ್ಮಾಯಿ ಹೇಳಿದರು. </p>.<p><strong>ಸರ್ಕಾರ ಪರಿಹಾರ ನೀಡಲಿ:</strong></p>.<p>‘ನಿರಂತರ ಮಳೆಯಿಂದ ರಾಜ್ಯದಾದ್ಯಂತ ಮನೆ ಹಾನಿ ಮತ್ತು ಬೆಳೆ ಹಾನಿಗಳಾಗಿವೆ. 40ಕ್ಕೂ ಹೆಚ್ಚು ಸಾವುಗಳಾಗಿವೆ. ಪರಿಹಾರ ನೀಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿಲ್ಲ. ನೆರೆ ಸಂತ್ರಸ್ತರ ಕಷ್ಟಕ್ಕೆ ಸಚಿವರು ಸ್ಪಂದಿಸುತ್ತಿಲ್ಲ. ಮನೆ ಹಾನಿ ಪ್ರಕರಣದಲ್ಲಿ ಮನೆಗಳಿಗೆ ₹3 ಲಕ್ಷ ಮತ್ತು ₹5 ಲಕ್ಷ ಪರಿಹಾರ ನೀಡಬೇಕು. ಬೆಳೆ ನಾಶವಾದರೆ ಹೆಕ್ಟೇರ್ಗೆ ₹13 ಸಾವಿರ ಪರಿಹಾರ ಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ’ ಎಂದರು. </p>.<p>‘ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಮಾಡಿಕೊಂಡೇ ಬಂದಿದೆ. ಈಗಲೂ ಸ್ಪಷ್ಟತೆ ಇಲ್ಲ. ನಾವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಇವರಿಂದ ನಾವು ಪಾಠ ಕಲಿಯಬೇಕಿಲ್ಲ. ಮೊದಲಿನಿಂದಲೂ ಕಾಂಗ್ರೆಸ್ ವಿರೋಧ ಇದೆ. ಆದರೆ ಅವರ ಬಣ್ಣ ಈಗ ಬಯಲಾಗಿದೆ’ ಎಂದು ಕುಟುಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಉಡುಪಿ ಪ್ರಕರಣದಲ್ಲಿ ತನಿಖೆಗೂ ಮುಂಚೆಯೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಪೊಲೀಸರು ಪ್ರಕರಣ ಮುಚ್ಚಿ ಹಾಕುವ ಶಂಕೆ ಇದೆ. ಹೆಣ್ಣು ಮಕ್ಕಳ ಗೌರವದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. </p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಅಲ್ಲಿ ವಿಡಿಯೊ ರೆಕಾರ್ಡ್ ಮಾಡಿಲ್ಲ ಅಂದರೆ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಏಕೆ ಸಸ್ಪೆಂಡ್ ಮಾಡಿದೆ? ತಪ್ಪೊಪ್ಪಿಗೆ ಪತ್ರವನ್ನು ಏಕೆ ಬರೆಯಿಸಿಕೊಂಡರು? ಇದು ಕಾಲೇಜಿನಲ್ಲಿ ಮುಗಿದು ಹೋದ ಪ್ರಕರಣ ಅಲ್ಲ, ಮುಚ್ಚಿಹೋದ ಪ್ರಕರಣ’ ಎಂದು ಆರೋಪಿಸಿದರು. </p>.<p><strong>ದಂಗೆಕೋರರ ರಕ್ಷಣೆ:</strong></p>.<p>‘ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣವೇ ಬೇರೆ. ಕನ್ನಡ ಸಂಘಟನೆಗಳ ಪ್ರಕರಣವೇ ಬೇರೆ. ಪೊಲೀಸ್ ಠಾಣೆಗಳಿಗೆ ಕಲ್ಲು ಹೊಡೆದು ಬೆಂಕಿ ಹಚ್ಚಿದ ದಂಗೆಕೋರರನ್ನು ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡಲು ಹೊರಟಿದೆ. ಈ ಗಲಭೆ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು’ ಎಂದು ಬೊಮ್ಮಾಯಿ ಹೇಳಿದರು. </p>.<p><strong>ಸರ್ಕಾರ ಪರಿಹಾರ ನೀಡಲಿ:</strong></p>.<p>‘ನಿರಂತರ ಮಳೆಯಿಂದ ರಾಜ್ಯದಾದ್ಯಂತ ಮನೆ ಹಾನಿ ಮತ್ತು ಬೆಳೆ ಹಾನಿಗಳಾಗಿವೆ. 40ಕ್ಕೂ ಹೆಚ್ಚು ಸಾವುಗಳಾಗಿವೆ. ಪರಿಹಾರ ನೀಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿಲ್ಲ. ನೆರೆ ಸಂತ್ರಸ್ತರ ಕಷ್ಟಕ್ಕೆ ಸಚಿವರು ಸ್ಪಂದಿಸುತ್ತಿಲ್ಲ. ಮನೆ ಹಾನಿ ಪ್ರಕರಣದಲ್ಲಿ ಮನೆಗಳಿಗೆ ₹3 ಲಕ್ಷ ಮತ್ತು ₹5 ಲಕ್ಷ ಪರಿಹಾರ ನೀಡಬೇಕು. ಬೆಳೆ ನಾಶವಾದರೆ ಹೆಕ್ಟೇರ್ಗೆ ₹13 ಸಾವಿರ ಪರಿಹಾರ ಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ’ ಎಂದರು. </p>.<p>‘ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಮಾಡಿಕೊಂಡೇ ಬಂದಿದೆ. ಈಗಲೂ ಸ್ಪಷ್ಟತೆ ಇಲ್ಲ. ನಾವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಇವರಿಂದ ನಾವು ಪಾಠ ಕಲಿಯಬೇಕಿಲ್ಲ. ಮೊದಲಿನಿಂದಲೂ ಕಾಂಗ್ರೆಸ್ ವಿರೋಧ ಇದೆ. ಆದರೆ ಅವರ ಬಣ್ಣ ಈಗ ಬಯಲಾಗಿದೆ’ ಎಂದು ಕುಟುಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>