<p><strong>ಬ್ಯಾಡಗಿ:</strong> ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಭಾನುವಾರ ರೈತರಿಗೆ 40 ಟನ್ ಯೂರಿಯಾ ಗೊಬ್ಬರವನ್ನು ವಿತರಿಸಲಾಯಿತು. ಬೆಳಿಗ್ಗೆ ಕೇವಲ 15 ಟನ್ (330 ಚೀಲ) ಯೂರಿಯಾ ಗೊಬ್ಬರ ಹೊತ್ತ ಲಾರಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ರೈತರು ಗೊಬ್ಬರಕ್ಕಾಗಿ ಮುಗಿಬಿದ್ದರು.</p>.<p>ನಾ ಮುಂದು ತಾ ಮುಂದು ಎನ್ನುವಂತೆ ಗೊಬ್ಬರಕ್ಕಾಗಿ ಗಲಾಟೆ ನಡೆಯಿತು. 500ಕ್ಕೂ ಹೆಚ್ಚು ರೈತರು ಜಮಾಯಿಸಿದ್ದರಿಂದ ಗೊಬ್ಬರ ವಿತರಣೆಯಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟವು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರನ್ನು ನಿಯಂತ್ರಿಸುವಲ್ಲಿ ಹರಸಾಹಸ ಪಡಬೇಕಾಯಿತು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕೂಡಾ ಸ್ಥಳಕ್ಕೆ ಆಗಮಿಸಿ ರೈತರನ್ನು ಸರದಿ ಸಾಲಿನಲ್ಲಿ ನಿಂತು ಗೊಬ್ಬರನ್ನು ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು. ಸಾಕಷ್ಟು ಗೊಬ್ಬರದ ದಾಸ್ತಾನಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ರೈತರನ್ನು ಸಮಾಧಾನ ಪಡಿಸಿದರು.</p>.<p>ಇದೇ ವೇಳೆ ಸ್ಥಳದಲ್ಲಿದ್ದ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮುಖಂಡ ನಾಗರಾಜ ಆನ್ವೇರಿ ಸೇರಿದಂತೆ ಇನ್ನಿತರರು ರೈತರನ್ನು ಸರದಿ ಸಾಲಿನಲ್ಲಿ ನಿಲ್ಲಿಸಲು ಶಾಂತ ರೀತಿಯಲ್ಲಿ ಗೊಬ್ಬರ ವಿತರಣೆಗೆ ನೆರವಾದರು.</p>.<p>ಈ ಮೂಲಕ ರೈತರಿಗೆ ತಲಾ ಎರಡು ಚೀಲಗಳಂತೆ ಒಟ್ಟಾರೆ 40 ಟನ್ ಗೊಬ್ಬರನ್ನು ಸಂಜೆಯವರೆಗೂ ಶಾಂತ ರೀತಿಯಲ್ಲಿ ವಿತರಿಸಲಾಯಿತು. ಸೋಮವಾರ ಇನ್ನೂ15 ಟನ್ ಗೊಬ್ಬರ ಬರಲಿದ್ದು ಉಳಿದ ರೈತರು ಪಡೆದುಕೊಳ್ಳುವಂತೆ ಸೂಚಿಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಭಾನುವಾರ ರೈತರಿಗೆ 40 ಟನ್ ಯೂರಿಯಾ ಗೊಬ್ಬರವನ್ನು ವಿತರಿಸಲಾಯಿತು. ಬೆಳಿಗ್ಗೆ ಕೇವಲ 15 ಟನ್ (330 ಚೀಲ) ಯೂರಿಯಾ ಗೊಬ್ಬರ ಹೊತ್ತ ಲಾರಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ರೈತರು ಗೊಬ್ಬರಕ್ಕಾಗಿ ಮುಗಿಬಿದ್ದರು.</p>.<p>ನಾ ಮುಂದು ತಾ ಮುಂದು ಎನ್ನುವಂತೆ ಗೊಬ್ಬರಕ್ಕಾಗಿ ಗಲಾಟೆ ನಡೆಯಿತು. 500ಕ್ಕೂ ಹೆಚ್ಚು ರೈತರು ಜಮಾಯಿಸಿದ್ದರಿಂದ ಗೊಬ್ಬರ ವಿತರಣೆಯಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟವು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರನ್ನು ನಿಯಂತ್ರಿಸುವಲ್ಲಿ ಹರಸಾಹಸ ಪಡಬೇಕಾಯಿತು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕೂಡಾ ಸ್ಥಳಕ್ಕೆ ಆಗಮಿಸಿ ರೈತರನ್ನು ಸರದಿ ಸಾಲಿನಲ್ಲಿ ನಿಂತು ಗೊಬ್ಬರನ್ನು ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು. ಸಾಕಷ್ಟು ಗೊಬ್ಬರದ ದಾಸ್ತಾನಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ರೈತರನ್ನು ಸಮಾಧಾನ ಪಡಿಸಿದರು.</p>.<p>ಇದೇ ವೇಳೆ ಸ್ಥಳದಲ್ಲಿದ್ದ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮುಖಂಡ ನಾಗರಾಜ ಆನ್ವೇರಿ ಸೇರಿದಂತೆ ಇನ್ನಿತರರು ರೈತರನ್ನು ಸರದಿ ಸಾಲಿನಲ್ಲಿ ನಿಲ್ಲಿಸಲು ಶಾಂತ ರೀತಿಯಲ್ಲಿ ಗೊಬ್ಬರ ವಿತರಣೆಗೆ ನೆರವಾದರು.</p>.<p>ಈ ಮೂಲಕ ರೈತರಿಗೆ ತಲಾ ಎರಡು ಚೀಲಗಳಂತೆ ಒಟ್ಟಾರೆ 40 ಟನ್ ಗೊಬ್ಬರನ್ನು ಸಂಜೆಯವರೆಗೂ ಶಾಂತ ರೀತಿಯಲ್ಲಿ ವಿತರಿಸಲಾಯಿತು. ಸೋಮವಾರ ಇನ್ನೂ15 ಟನ್ ಗೊಬ್ಬರ ಬರಲಿದ್ದು ಉಳಿದ ರೈತರು ಪಡೆದುಕೊಳ್ಳುವಂತೆ ಸೂಚಿಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>