<p><strong>ಹಾವೇರಿ:</strong> ಜಿಲ್ಲೆಯ ಹಲವು ಕಡೆಗಳಲ್ಲಿ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಗುರುವಾರ ದಿಢೀರ್ ಪರಿಶೀಲನೆ ನಡೆಸಿದರು.</p><p>ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜೊತೆಯಲ್ಲಿ ಜಿಲ್ಲೆಯ ಹಲವು ಗೋದಾಮುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ದಾಸ್ತಾನು ಬಗ್ಗೆ ಮಾಹಿತಿ ಪಡೆದುಕೊಂಡರು. ಪೂರೈಕೆ, ಸಂಗ್ರಹ ಹಾಗೂ ಮಾರಾಟದ ಬಗ್ಗೆ ದಾಖಲೆ ಸಮೇತ ವಿವರಣೆ ಪಡೆದರು.</p><p>ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಾಗಿ ರೈತರು ದೂರುತ್ತಿದ್ದರು. ಕೆಲವರು ಯೂರಿಯಾವನ್ನು ಅಕ್ರಮವಾಗಿ ಖರೀದಿಸಿ ದಾಸ್ತಾನು ಇರಿಸಿ ದುಪ್ಪಟ್ಟು ಬೆಲೆಗೆ ಮಾರುತ್ತಿರುವ ಬಗ್ಗೆ ದೂರುಗಳಿದ್ದವು. ಹೀಗಾಗಿ, ಹಲವು ಗೋದಾಮುಗಳಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಯಿತು’ ಎಂದು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಅಕ್ರಮ ದಾಸ್ತಾನು ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಪುನಃ ದಿಢೀರ್ ಭೇಟಿ ಇರಲಿದೆ’ ಎಂದರು.</p>.<p>ಜಿಲ್ಲಾಧಿಕಾರಿ ಜೊತೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಲವು ಕಡೆಗಳಲ್ಲಿ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಗುರುವಾರ ದಿಢೀರ್ ಪರಿಶೀಲನೆ ನಡೆಸಿದರು.</p><p>ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜೊತೆಯಲ್ಲಿ ಜಿಲ್ಲೆಯ ಹಲವು ಗೋದಾಮುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ದಾಸ್ತಾನು ಬಗ್ಗೆ ಮಾಹಿತಿ ಪಡೆದುಕೊಂಡರು. ಪೂರೈಕೆ, ಸಂಗ್ರಹ ಹಾಗೂ ಮಾರಾಟದ ಬಗ್ಗೆ ದಾಖಲೆ ಸಮೇತ ವಿವರಣೆ ಪಡೆದರು.</p><p>ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಾಗಿ ರೈತರು ದೂರುತ್ತಿದ್ದರು. ಕೆಲವರು ಯೂರಿಯಾವನ್ನು ಅಕ್ರಮವಾಗಿ ಖರೀದಿಸಿ ದಾಸ್ತಾನು ಇರಿಸಿ ದುಪ್ಪಟ್ಟು ಬೆಲೆಗೆ ಮಾರುತ್ತಿರುವ ಬಗ್ಗೆ ದೂರುಗಳಿದ್ದವು. ಹೀಗಾಗಿ, ಹಲವು ಗೋದಾಮುಗಳಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಯಿತು’ ಎಂದು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಅಕ್ರಮ ದಾಸ್ತಾನು ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಪುನಃ ದಿಢೀರ್ ಭೇಟಿ ಇರಲಿದೆ’ ಎಂದರು.</p>.<p>ಜಿಲ್ಲಾಧಿಕಾರಿ ಜೊತೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>