ಬರ ಮತ್ತು ಅತಿವೃಷ್ಟಿ ನೆರೆಯಿಂದ ರೈತರು ಪ್ರತಿ ವರ್ಷ ತೊಂದರೆಗೆ ಒಳಗಾಗುತ್ತಿದ್ದರು. ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಉತ್ತಮ ಫಸಲು ಬಂದಿದೆ. ಕಳೆದ ವರ್ಷಗಳಿಗಿಂತ ದ್ವಿಗುಣವಾದ ಗೊಬ್ಬರ ಬೇಡಿಕೆ ಇದೆ. ಪ್ರಸ್ತುತ ಮಳೆಯಾಗುತ್ತಿರುವುದರಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ಕೆಲವರು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡಿದ್ದಾರೆ. ರೈತರ ಬೇಡಿಕೆಯಂತೆ ಯೂರಿಯಾವನ್ನು ಮೂರ್ನಾಲ್ಕು ದಿನಗಳಲ್ಲಿ ಪೂರೈಸಬೇಕು. ಅಕ್ರಮವಾಗಿ ಯೂರಿಯಾ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಜಿಲ್ಲಾಧಿಕಾರಿಗೆ ಬೇಡಿಕೆ ಸಲ್ಲಿಸಿದರು.