‘ಪಂಚಮಸಾಲಿ’ ಸರ್ಟಿಫಿಕೇಟ್ ಪಡೆಯಿರಿ:ಪಂಚಮಸಾಲಿ ಸಮಾಜದ ಎಲ್ಲ ಬಾಂಧವರು ಮೊದಲು ‘ವೀರಶೈವ ಲಿಂಗಾಯತ ಪಂಚಮಸಾಲಿ’ ಎಂಬ ಜಾತಿ ಪ್ರಮಾಣ ಪತ್ರ ಪಡೆಯಬೇಕು. ಈಗಾಗಲೇ ದಾವಣಗೆರೆ, ಗದಗ ಜಿಲ್ಲೆಯಲ್ಲಿ ಜಾತಿ ಪ್ರಮಾಣ ಪತ್ರ ಕೆಲವರಿಗೆ ಸಿಕ್ಕಿದೆ. ಈ ಜಾತಿ ಪ್ರಮಾಣ ಪತ್ರ ಪಡೆಯದಿದ್ದರೆ, ಮೀಸಲಾತಿ ಸಿಕ್ಕ ನಂತರ ‘3ಬಿ’ಯಲ್ಲಿರುವ ಲಿಂಗಾಯತ ಒಳಪಂಗಡಗಳು ಮುಗಿಬಿದ್ದು, ನಿಜವಾದ ಪಂಚಮಸಾಲಿಗಳಿಗೆ ಅನ್ಯಾಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.