<p><strong>ಗುತ್ತಲ</strong>: ಪಟ್ಟಣದ ವೀರಭದ್ರೇಶ್ವರ ಅಗ್ನಿಕುಂಡ ಜಾತ್ರಾ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.</p>.<p>ಪ್ರತಿ ವರ್ಷದಂತೆ ಶ್ರಾವಣ ಮಾಸದ ಕೊನೆಯ ದಿನ ನಡೆಯುವ ಜಾತ್ರೆಯ ಅಂಗವಾಗಿ ಬೆಳಿಗ್ಗೆ ಅನೇಕ ಪುರವಂತರು ಶಿವ, ವಿಷ್ಣು, ವೀರಭದ್ರೇಶ್ವರ, ದಕ್ಷಬ್ರಹ್ಮನ ಸಂಹಾರ ಸೇರಿದಂತೆ ವಿವಿಧ ದೃಷ್ಠಾಂತಗಳ್ನು ಒಡಪುಗಳ ಮೂಲಕ ಹೇಳುತ್ತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಈ ವೇಳೆ ಪಟ್ಟಣದ ಆರಾದ್ಯ ದೈವ ಶ್ರೀಹೇಮಗಿರಿ ಚನ್ನಬಸವೇಶ್ವರರ ಮಠಕ್ಕೆ ಗುಗ್ಗಳದ ಮೆರವಣಿಗೆ ಆಗಮಿಸಿದಾಗ ಪುರವಂತರಾದ ಬಸವರಾಜ ಗಂಗಣ್ಣನವರ ನೂರಾರು ಮೀಟರ್ ಉದ್ದದ ದಾರವನ್ನು ನಾಲಗಿಯಲ್ಲಿ ಎಳೆಯುತ್ತಾ ಮೆರವಣಿಗೆ ಸಮಾಳದ ಶಬ್ದಕ್ಕೆ ತಕ್ಕಂತೆ ನಾಟ್ಯ ಮಾಡುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆಯಿತು.</p>.<p>ಇದೇ ವೇಳೆ ಅನೇಕರು ತಮ್ಮ ಹರಕೆಯನ್ನು ತೀರಿಸಲು ಬಾಯಿ, ಕೈಗಳಿಗೆ ಶಸ್ತ್ರಗಳನ್ನು ಚುಚ್ಚಿಸಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಬಸ್ ನಿಲ್ದಾಣದ ಸರ್ಕಲ್ ಬಳಿ ಶಿವಪ್ಪ ಇಚ್ಚಂಗಿ ಎಂಬ ಭಕ್ತರೊಬ್ಬರು ತಾಮ್ರದ ಸೂಜೆ ಮೂಲಕ ಪೋಣಿಸಲಾದ ನೂರಾರು ಮೀಟರ್ ಉದ್ದನೆ ದಾರವನ್ನು ತನ್ನ ನಾಲಗೆಯಲ್ಲಿ ಚುಚ್ಚಿಕೊಂಡ ಹೊರ ತೆಗೆದ ದೃಶ್ಯ ಭಕ್ತರು ಗಮನ ಸೆಳೆಯಿತು.</p>.<p>ಪಟ್ಟಣ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸಂಜೆ 5 ಗಂಟೆ ಸುಮಾರಿಗೆ ವೀರಭದ್ರೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ನಂತರ ಸಂಪ್ರದಾಯದ ಪೂಜಾ ವಿಧಿ ವಿಧಾನಗಳ ಮುಗಿದ ನಂತರ ದೊಡ್ಡದಾದ ಅಗ್ನಿಕುಂಡವನ್ನು ಪುರವಂತರು ಹಾಗೂ ಭಕ್ತರು ಪ್ರವೇಶ ಕಾರ್ಯಕ್ರಮ ಸಾಂಗವಾಗಿ ನೇರವರಿತು.</p>.<p>ಈ ವೇಳೆ ಎಲ್ಲಡೆ ಹರ ಹರ ಮಹದೇವ ಜೈ ಘೋಷ ಕೇಳುತ್ತಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ</strong>: ಪಟ್ಟಣದ ವೀರಭದ್ರೇಶ್ವರ ಅಗ್ನಿಕುಂಡ ಜಾತ್ರಾ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.</p>.<p>ಪ್ರತಿ ವರ್ಷದಂತೆ ಶ್ರಾವಣ ಮಾಸದ ಕೊನೆಯ ದಿನ ನಡೆಯುವ ಜಾತ್ರೆಯ ಅಂಗವಾಗಿ ಬೆಳಿಗ್ಗೆ ಅನೇಕ ಪುರವಂತರು ಶಿವ, ವಿಷ್ಣು, ವೀರಭದ್ರೇಶ್ವರ, ದಕ್ಷಬ್ರಹ್ಮನ ಸಂಹಾರ ಸೇರಿದಂತೆ ವಿವಿಧ ದೃಷ್ಠಾಂತಗಳ್ನು ಒಡಪುಗಳ ಮೂಲಕ ಹೇಳುತ್ತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಈ ವೇಳೆ ಪಟ್ಟಣದ ಆರಾದ್ಯ ದೈವ ಶ್ರೀಹೇಮಗಿರಿ ಚನ್ನಬಸವೇಶ್ವರರ ಮಠಕ್ಕೆ ಗುಗ್ಗಳದ ಮೆರವಣಿಗೆ ಆಗಮಿಸಿದಾಗ ಪುರವಂತರಾದ ಬಸವರಾಜ ಗಂಗಣ್ಣನವರ ನೂರಾರು ಮೀಟರ್ ಉದ್ದದ ದಾರವನ್ನು ನಾಲಗಿಯಲ್ಲಿ ಎಳೆಯುತ್ತಾ ಮೆರವಣಿಗೆ ಸಮಾಳದ ಶಬ್ದಕ್ಕೆ ತಕ್ಕಂತೆ ನಾಟ್ಯ ಮಾಡುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆಯಿತು.</p>.<p>ಇದೇ ವೇಳೆ ಅನೇಕರು ತಮ್ಮ ಹರಕೆಯನ್ನು ತೀರಿಸಲು ಬಾಯಿ, ಕೈಗಳಿಗೆ ಶಸ್ತ್ರಗಳನ್ನು ಚುಚ್ಚಿಸಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಬಸ್ ನಿಲ್ದಾಣದ ಸರ್ಕಲ್ ಬಳಿ ಶಿವಪ್ಪ ಇಚ್ಚಂಗಿ ಎಂಬ ಭಕ್ತರೊಬ್ಬರು ತಾಮ್ರದ ಸೂಜೆ ಮೂಲಕ ಪೋಣಿಸಲಾದ ನೂರಾರು ಮೀಟರ್ ಉದ್ದನೆ ದಾರವನ್ನು ತನ್ನ ನಾಲಗೆಯಲ್ಲಿ ಚುಚ್ಚಿಕೊಂಡ ಹೊರ ತೆಗೆದ ದೃಶ್ಯ ಭಕ್ತರು ಗಮನ ಸೆಳೆಯಿತು.</p>.<p>ಪಟ್ಟಣ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸಂಜೆ 5 ಗಂಟೆ ಸುಮಾರಿಗೆ ವೀರಭದ್ರೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ನಂತರ ಸಂಪ್ರದಾಯದ ಪೂಜಾ ವಿಧಿ ವಿಧಾನಗಳ ಮುಗಿದ ನಂತರ ದೊಡ್ಡದಾದ ಅಗ್ನಿಕುಂಡವನ್ನು ಪುರವಂತರು ಹಾಗೂ ಭಕ್ತರು ಪ್ರವೇಶ ಕಾರ್ಯಕ್ರಮ ಸಾಂಗವಾಗಿ ನೇರವರಿತು.</p>.<p>ಈ ವೇಳೆ ಎಲ್ಲಡೆ ಹರ ಹರ ಮಹದೇವ ಜೈ ಘೋಷ ಕೇಳುತ್ತಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>