<p><strong>ಕುಮಾರಪಟ್ಟಣ:</strong> ರಾಣೆಬೆನ್ನೂರು ತಾಲ್ಲೂಕಿನ ಐರಾವತ ಕ್ಷೇತ್ರ ಐರಣಿ ಗ್ರಾಮದ ತುಂಗಭದ್ರಾ ನದಿ ತೀರದ ಬೆಟ್ಟದ ಮೇಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ರಥೋತ್ಸವ ಹುಣ್ಣಿಮೆಯಂದು ಗುರುವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಸಂತಶ್ರೇಷ್ಠ ಕರ್ಕಿಹಳ್ಳಿಮಠ (ಕನವಳ್ಳಿ) ಸುರೇಶ ಪಾಟೀಲ ಇವರ ಸಾನ್ನಿಧ್ಯದಲ್ಲಿ ಬೆಳಿಗ್ಗೆ ಹೋಮ, ಹವನ, ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಜರುಗಿತು.</p>.<p>ಭಕ್ತರಿಗೆ ಕೋಸಂಬರಿ, ಬೆಲ್ಲದ ಪಾನಕ ವಿತರಿಸಿದ ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಐರಣಿ ಲಕ್ಷ್ಮೀವೆಂಕಟೇಶ್ವರ ಪಂಚ ದೇವಸ್ಥಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರಾಣೆಬೆನ್ನೂರು, ಹರಿಹರ, ಐರಣಿ ಮತ್ತು ಬೇರೆಡೆಯಿಂದ ಬಂದ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಾರಪಟ್ಟಣ:</strong> ರಾಣೆಬೆನ್ನೂರು ತಾಲ್ಲೂಕಿನ ಐರಾವತ ಕ್ಷೇತ್ರ ಐರಣಿ ಗ್ರಾಮದ ತುಂಗಭದ್ರಾ ನದಿ ತೀರದ ಬೆಟ್ಟದ ಮೇಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ರಥೋತ್ಸವ ಹುಣ್ಣಿಮೆಯಂದು ಗುರುವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಸಂತಶ್ರೇಷ್ಠ ಕರ್ಕಿಹಳ್ಳಿಮಠ (ಕನವಳ್ಳಿ) ಸುರೇಶ ಪಾಟೀಲ ಇವರ ಸಾನ್ನಿಧ್ಯದಲ್ಲಿ ಬೆಳಿಗ್ಗೆ ಹೋಮ, ಹವನ, ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ಜರುಗಿತು.</p>.<p>ಭಕ್ತರಿಗೆ ಕೋಸಂಬರಿ, ಬೆಲ್ಲದ ಪಾನಕ ವಿತರಿಸಿದ ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಐರಣಿ ಲಕ್ಷ್ಮೀವೆಂಕಟೇಶ್ವರ ಪಂಚ ದೇವಸ್ಥಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರಾಣೆಬೆನ್ನೂರು, ಹರಿಹರ, ಐರಣಿ ಮತ್ತು ಬೇರೆಡೆಯಿಂದ ಬಂದ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>