<p><strong>ರಾಣೆಬೆನ್ನೂರು</strong>: ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯನ್ನು ಸಮರ್ಪಕವಾಗಿ ನಿರ್ವಹಿಸುವ ತಂತ್ರಜ್ಞಾನ ಪ್ರಚಲಿತಗೊಳಿಸುವ ಅವಶ್ಯಕತೆ ಇದೆ. ಕೃಷಿ ಭೂಮಿಯ ಫಲವತ್ತತೆ ಹೆಚ್ಚಿಸುವ ಜಾಗೃತಿ ಕಾರ್ಯಕ್ರಮ ನಡೆಸಬೇಕು’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹನುಮನಮಟ್ಟಿ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೈಜ್ಞಾನಿಕ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣು ಪರೀಕ್ಷೆ, ಬೀಜೋತ್ಪಾದನೆ, ತೋಟಗಾರಿಕೆ ಸಸಿ ಉತ್ಪಾದನೆ ಕುರಿತು ವಿವರಿಸಿದರು.</p>.<p>ಈ ವೇಳೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಅಭಿವೃದ್ಧಿಪಡಿಸಿದ ವಿವಿಧ ಹಸ್ತಪ್ರತಿ ಬಿಡುಗಡೆ ಗೊಳಿಸಲಾಯಿತು. ಮಣ್ಣು ಮತ್ತು ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಲಾಯಿತು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಎಂ.ವಿ. ಮಂಜುನಾಥ, ಹಾವೇರಿಯ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಕೆ, ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎ.ಎಚ್. ಬಿರಾದಾರ ಅವರು ಪ್ರಗತಿ ವರದಿ ಮಂಡಿಸಿದರು.</p>.<p>ಕೆ.ವಿ. ಬಸವಕುಮಾರ, ಉಸ್ತುವಾರಿ ಅಧಿಕಾರಿ ಎಸ್.ಎಲ್. ಪಾಟೀಲ, ಸಿ.ಪಿ. ಮಲ್ಲಾಪುರ, ಗಂಗಾಧರ್ ಕೆ, ಅಟಾರಿ, ನಾಗರಾಜು ಪಿ, ಕರಿಯಲ್ಲಪ್ಪ ಕೆ, ಶಿವಯೋಗಿ ಯಲಿ, ಅನಿಲ್ ಜಿ. ಬಡ್ನಿ, ನರ್ಮದಾ ಎಂ, ರೇಷ್ಮೆ, ಶಂಕರಗೌಡ ಪಾಟೀಲ, ಮಧುರಾ ನವಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯನ್ನು ಸಮರ್ಪಕವಾಗಿ ನಿರ್ವಹಿಸುವ ತಂತ್ರಜ್ಞಾನ ಪ್ರಚಲಿತಗೊಳಿಸುವ ಅವಶ್ಯಕತೆ ಇದೆ. ಕೃಷಿ ಭೂಮಿಯ ಫಲವತ್ತತೆ ಹೆಚ್ಚಿಸುವ ಜಾಗೃತಿ ಕಾರ್ಯಕ್ರಮ ನಡೆಸಬೇಕು’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹನುಮನಮಟ್ಟಿ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೈಜ್ಞಾನಿಕ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣು ಪರೀಕ್ಷೆ, ಬೀಜೋತ್ಪಾದನೆ, ತೋಟಗಾರಿಕೆ ಸಸಿ ಉತ್ಪಾದನೆ ಕುರಿತು ವಿವರಿಸಿದರು.</p>.<p>ಈ ವೇಳೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಅಭಿವೃದ್ಧಿಪಡಿಸಿದ ವಿವಿಧ ಹಸ್ತಪ್ರತಿ ಬಿಡುಗಡೆ ಗೊಳಿಸಲಾಯಿತು. ಮಣ್ಣು ಮತ್ತು ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಲಾಯಿತು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಎಂ.ವಿ. ಮಂಜುನಾಥ, ಹಾವೇರಿಯ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಕೆ, ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎ.ಎಚ್. ಬಿರಾದಾರ ಅವರು ಪ್ರಗತಿ ವರದಿ ಮಂಡಿಸಿದರು.</p>.<p>ಕೆ.ವಿ. ಬಸವಕುಮಾರ, ಉಸ್ತುವಾರಿ ಅಧಿಕಾರಿ ಎಸ್.ಎಲ್. ಪಾಟೀಲ, ಸಿ.ಪಿ. ಮಲ್ಲಾಪುರ, ಗಂಗಾಧರ್ ಕೆ, ಅಟಾರಿ, ನಾಗರಾಜು ಪಿ, ಕರಿಯಲ್ಲಪ್ಪ ಕೆ, ಶಿವಯೋಗಿ ಯಲಿ, ಅನಿಲ್ ಜಿ. ಬಡ್ನಿ, ನರ್ಮದಾ ಎಂ, ರೇಷ್ಮೆ, ಶಂಕರಗೌಡ ಪಾಟೀಲ, ಮಧುರಾ ನವಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>