‘ಕಡ್ಡಾಯವಾಗಿ ಮಾಸ್ಕ್ ಧರಿಸಿ’

ಸವಣೂರ: ಅಂತರನು ಕಾಯ್ದುಕೊಂಡು, ಮಾಸ್ಕ್ ಧರಿಸುವ ಮೂಲಕ ಕೋವಿಡ್-19 ಹರಡದಂತೆ ನೋಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಜರುಗುವ ವಾರದ ಸಂತೆಯಲ್ಲಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಕಂದಾಯ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ ವತಿಯಿಂದ ಮಾಸ್ಕ್ ಅಭಿಯಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಬಿಇಒ ಐ.ಬಿ. ಬೆನಕೊಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಾ ಕಟ್ಟಿಮನಿ, ಟಿಎಚ್ಒ ಡಾ. ಚಂದ್ರಕಲಾ ಜೆ, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಕಾಶ ಪೂಜಾರ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.