6ನೇ ವೇತನ ಆಯೋಗದ ಮುಂದೆ ಪಿಂಚಣಿ ಬೇಡಿಕೆಯನ್ನಿಟ್ಟಾಗ, ನಮ್ಮದು ನ್ಯಾಯಯುತ ಬೇಡಿಕೆ ಎಂದು ಪರಿಗಣಿಸಿ, ಅನುದಾನಿತ ನೌಕರರಿಗೂ ಪಿಂಚಣಿ ನೀಡಲು ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ಪುನರ್ ಪರಿಶೀಲನಾ ಸಮಿತಿ ರಚಿಸಿ, ಶಿಫಾರಸ್ಸನ್ನು ತಿರಸ್ಕರಿಸಿತು. ಅನುದಾನಿತ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಪಿಂಚಣಿ ಮತ್ತು ಇತರೆ ಸೌಲಭ್ಯಗಳಿಗೆ ಪರಿಗಣಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿ, ತಡೆಯಾಜ್ಞೆ ಪಡೆದುಕೊಂಡಿದೆ ಎಂದು ವಿವರಿಸಿದರು.