ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯವಾಗಿ ಮತದಾನ ಮಾಡಿ

ಸುರಪುರ: ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೀನಾಕ್ಷಿ ಪಾಟೀಲ ಮನವಿ
Last Updated 5 ಏಪ್ರಿಲ್ 2018, 12:48 IST
ಅಕ್ಷರ ಗಾತ್ರ

ಸುರಪುರ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಬಲ ಅಸ್ತ್ರವಾಗಿದೆ. ಇದರ ಬಗ್ಗೆ ಯಾರೂ ನಿರ್ಲಕ್ಷ್ಯ ವಹಿಸಬಾರದು. ಮತದಾನದ ದಿನ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಬಲವರ್ಧನೆಗೆ ಎಲ್ಲರೂ ಕೈ ಜೋಡಿಸಬೇಕು’ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೀನಾಕ್ಷಿ ಪಾಟೀಲ ಹೇಳಿದರು.ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಿಂದ ಮಂಗಳವಾರ ನಗರದ ಮ್ಯಾಗೇರಿ ಬಡಾವಣೆಯಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಎಲ್ಲರಿಗೂ ಮತದಾನದ ಹಕ್ಕನ್ನು ಸಂವಿಧಾನದತ್ತವಾಗಿ ನೀಡಲಾಗಿದೆ. ನಿರ್ಲಕ್ಷ್ಯ ತೋರಿ ಈ ಹಕ್ಕನ್ನು ಕಳೆದುಕೊಳ್ಳಬೇಡಿ. ಒಂದೊಂದು ಮತವು ದೇಶದ ಭವಿಷ್ಯವನ್ನು ಬದಲಿಸುತ್ತದೆ. ರಾಜಕೀಯ ಪಕ್ಷಗಳ ಓಲೈಕೆಗೆ ಮಾರು ಹೋಗಬೇಡಿ. ಹಣ, ವಸ್ತ್ರ ಇತರೆ ಆಮಿಷಕ್ಕೆ ಒಳಗಾಗಿ ಮತ ಮಾರಿಕೊಳ್ಳಬೇಡಿ’ ಎಂದರು.‘ಅಭಿವೃದ್ದಿಗಾಗಿ ಶ್ರಮಿಸುವವರಿಗೆ, ದೇಶದ ಮತ್ತು ಕ್ಷೇತ್ರದ ಬಗ್ಗೆ ಕಳಕಳಿ ಉಳ್ಳವರಿಗೆ ಮತ ನೀಡುವ ಅಧಿಕಾರ ನಿಮಗಿದೆ. ನಿಮ್ಮ ಮತ ದೇಶದ ಅಭಿವೃದ್ದಿಗೆ ಸಹಕಾರಿಯಾಗುತ್ತದೆ. ಕಾರಣ ಮತದಾನದಿಂದ ವಂಚಿತರಾ ಗಬೇಡಿ’ ಎಂದರು.‘ವಿಶೇಷವಾಗಿ ಮಹಿಳೆಯರು ಮುಂದೆ ಬರಬೇಕು. ಮತದಾನದಲ್ಲಿ ಮುಕ್ತವಾಗಿ ಭಾಗವಹಿಸಬೇಕು. ನಿರ್ಭೀತಿಯಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು’ ಎಂದು ಮನವಿ ಮಾಡಿದರು.ಮತದಾನ ಕುರಿತು ಪ್ರಮಾಣ ವಚನ ಬೋಧಿಸಲಾಯಿತು. ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಲಾಯಿತು.ಅಂಗನವಾಡಿ ಮೇಲ್ವಿಚಾರಕಿಯರಾದ ಚಂದ್ರಲೀಲಾ ನಿಂಬೂರ, ಗುರುಬಾಯಿ, ಸತ್ಯಮ್ಮ, ಸರಸ್ವತಿ ಜೇವರ್ಗಿ,ಭಾಗ್ಯ ಬೈರಿಮಡ್ಡಿ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

**

ಚುನಾವಣೆ ಪ್ರಕ್ರಿಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು.ತಪ್ಪದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಮೌಲ್ಯ ಮತ್ತು ತತ್ವಗಳನ್ನು ಎತ್ತಿ ಹಿಡಿಯಬೇಕು – ಮೀನಾಕ್ಷಿ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT