ತುಂಗಭದ್ರಾ ನದಿ ಒಂದು ತಿಂಗಳದಿಂದ ಸಂಪೂರ್ಣವಾಗಿ ಖಾಲಿಯಾಗಿದ್ದು, ಹಾವೇರಿ ಮತ್ತು ಗುತ್ತಲ ನಗರ ಸೇರಿದಂತೆ ತುಂಗಭದ್ರಾ ನದಿಯ ದಡದಲ್ಲಿರುವ ಎಲ್ಲ ಗ್ರಾಮಗಳಿಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.ಕುಡಿಯುವ ನೀರಿಗಾಗಿ ಖಾಸಗಿ ಕೊಳವೆ ಬಾವಿ ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಅವಶ್ಯಕತೆ ಇದ್ದ ಕಡೆ ಕೊಳವೆ ಬಾವಿಯನ್ನು ಕೊರೆಸಿ ಕುಡಿಯುವ ನೀರಿನ ಬವಣೆ ನೀಗಿಸಲು ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ಪ್ರಯತ್ನ ಮಾಡಿತ್ತು.ಆದರೂ ಕೆಲ ಕಡೆ ಕುಡಿಯುವ ನೀರಿನ ತೊಂದರೆ ಎದುರಾಗಿದೆ.