ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ್ದ ನಗರಸಭೆಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ‘ಹಲವಾರು ವರ್ಷಗಳಿಂದ ನೀರು ಶುದ್ಧೀಕರಣ ಘಟಕದ ಸ್ವಚ್ಛತೆ ಕೈಗೊಳ್ಳದ ಕಾರಣಕ್ಕೆ ನೀರು ಸರಬರಾಜಿನಲ್ಲಿ ತೊಂದೆರಯಾಗಿತ್ತು. ಹೂಳು ತುಂಬಿರುವ ಕಾರಣಕ್ಕೆ ಸಮರ್ಪಕವಾಗಿ ನೀರು ಶುದ್ಧೀಕರಣವಾಗುತ್ತಿರಲಿಲ್ಲ. ಸ್ವಚ್ಛತಾ ಕಾರ್ಯ ಏ.23ರವರೆಗೆ ನಡೆಯುವುದರಿಂದ ನಗರದ ಜನತೆಗೆ ಮೂರು ದಿನಗಳವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಹಕರಿಸಬೇಕು ಎಂದು ಮನವಿ ಮಾಡಿದರು.