ಆರ್.ಎಂ.ಕುಬೇರಪ್ಪ ಅವರು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಅನಿಲ ಪಾಟೀಲ, ಅಲ್ತಾಫ್ ಹಳ್ಳೂರು, ರುದ್ರಪ್ಪ ಲಮಾಣಿ, ಬಸವರಾಜ ಮಲಕಾರಿ, ಆನಂದ ಸಿಂಗನಾಥ ಅವರೊಂದಿಗೆ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಬೇರಪ್ಪ, ‘ಕ್ಷೇತ್ರದ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ. ಈ ಕ್ಷೇತ್ರದಲ್ಲಿ ಎಚ್.ಕೆ.ಪಾಟೀಲ ಅವರು ನಾಲ್ಕು ಬಾರಿ ಗೆದ್ದಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಪರ ಅಲೆ ಇದೆ. ಕೆಲ ತಪ್ಪು ನಿರ್ಧಾರಗಳಿಂದ ಈ ಕ್ಷೇತ್ರದಲ್ಲಿ ನನಗೆ ಎರಡು ಬಾರಿ ಹಿನ್ನಡೆಯಾಗಿದೆ. ಪದವೀಧರ ಕ್ಷೇತ್ರದ ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ನಾನೇ ಇದ್ದು, ಹಿಂದಿನ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಿದ್ದೇನೆ’ ಎಂದರು.