<p><strong>ಬ್ಯಾಡಗಿ</strong>: ಭಗವಂತನನ್ನು ಅರಿತಾಗ ಮಾತ್ರ ಅರಿವಿನ ಜ್ಞಾನ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ನಿತ್ಯ ದೇವರ ಸ್ಮರಣೆಮಾಡುವುದು ಅಗತ್ಯವೆಂದು ನೆಗಳೂರು ಹಿರೇಮಠದ ಗುರುಶಾಂತೇಶ್ವರ ಸ್ವಾಮೀಜಿ ಹೇಳಿದರು. </p>.<p>ತಾಲ್ಲೂಕಿನ ಅಂಗರಗಟ್ಟಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದ ಅಂಗವಾಗಿ ಶನಿವಾರ ಜರುಗಿದ ಧರ್ಮಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. </p>.<p>ಸನಾತನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಗುರು ಮತ್ತು ದೇವರಿಗೆ ವಿಶೇಷ ಸ್ಥಾನ ನೀಡಲಾಗಿದೆ. ಜನರು ಸಾಮಾಜಿಕ ಸಂಸ್ಕೃತಿಯನ್ನು ನಂಬಿ ಬದುಕುತ್ತಿದ್ದು, ಸಮೂಹದಲ್ಲಿ ಹಂಚಿಕೊಂಡು ತಿನ್ನುವ ಸ್ವಭಾವ ಬೆಳೆಸಿಕೊಳ್ಳಲಾಗಿದೆ. ಹೊಸ ಪೀಳಿಗೆ ಭವಿಷ್ಯದಲ್ಲಿ ಇದನ್ನು ಅನುಸರಿಸಬೇಕಾಗಿದೆ ಎಂದರು.</p>.<p>ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಸುರೇಶಗೌಡ್ರ ಪಾಟೀಲ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಗ್ರಾ.ಪಂ.ಅಧ್ಯಕ್ಷೆ ರೇಣುಕಾ ತಗಡಿನಮನಿ, ಉಪಾದ್ಯಕ್ಷ ನೀಲಗಿರಿಯಪ್ಪ ಕಾಕೋಳ, ಮುಖಂಡರಾದ ಚನ್ನಬಸಪ್ಪ ಹುಲ್ಲತ್ತಿ, ಪ್ರಕಾಶ ಬನ್ನಿಹಟ್ಟಿ, ನಾಗರಾಜ ಆನ್ವೇರಿ, ಶಿವಪುತ್ರಪ್ಪ ಅಗಡಿ, ದೇವಸ್ಥಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಬಗಡಿ, ಉಪಾಧ್ಯಕ್ಷ ನಾಗರಾಜ ಹಾದಿಮನಿ, ಯಶೋದಾ ಕಮತರ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಭಗವಂತನನ್ನು ಅರಿತಾಗ ಮಾತ್ರ ಅರಿವಿನ ಜ್ಞಾನ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ನಿತ್ಯ ದೇವರ ಸ್ಮರಣೆಮಾಡುವುದು ಅಗತ್ಯವೆಂದು ನೆಗಳೂರು ಹಿರೇಮಠದ ಗುರುಶಾಂತೇಶ್ವರ ಸ್ವಾಮೀಜಿ ಹೇಳಿದರು. </p>.<p>ತಾಲ್ಲೂಕಿನ ಅಂಗರಗಟ್ಟಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದ ಅಂಗವಾಗಿ ಶನಿವಾರ ಜರುಗಿದ ಧರ್ಮಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. </p>.<p>ಸನಾತನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಗುರು ಮತ್ತು ದೇವರಿಗೆ ವಿಶೇಷ ಸ್ಥಾನ ನೀಡಲಾಗಿದೆ. ಜನರು ಸಾಮಾಜಿಕ ಸಂಸ್ಕೃತಿಯನ್ನು ನಂಬಿ ಬದುಕುತ್ತಿದ್ದು, ಸಮೂಹದಲ್ಲಿ ಹಂಚಿಕೊಂಡು ತಿನ್ನುವ ಸ್ವಭಾವ ಬೆಳೆಸಿಕೊಳ್ಳಲಾಗಿದೆ. ಹೊಸ ಪೀಳಿಗೆ ಭವಿಷ್ಯದಲ್ಲಿ ಇದನ್ನು ಅನುಸರಿಸಬೇಕಾಗಿದೆ ಎಂದರು.</p>.<p>ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಸುರೇಶಗೌಡ್ರ ಪಾಟೀಲ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಗ್ರಾ.ಪಂ.ಅಧ್ಯಕ್ಷೆ ರೇಣುಕಾ ತಗಡಿನಮನಿ, ಉಪಾದ್ಯಕ್ಷ ನೀಲಗಿರಿಯಪ್ಪ ಕಾಕೋಳ, ಮುಖಂಡರಾದ ಚನ್ನಬಸಪ್ಪ ಹುಲ್ಲತ್ತಿ, ಪ್ರಕಾಶ ಬನ್ನಿಹಟ್ಟಿ, ನಾಗರಾಜ ಆನ್ವೇರಿ, ಶಿವಪುತ್ರಪ್ಪ ಅಗಡಿ, ದೇವಸ್ಥಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಬಗಡಿ, ಉಪಾಧ್ಯಕ್ಷ ನಾಗರಾಜ ಹಾದಿಮನಿ, ಯಶೋದಾ ಕಮತರ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>