ಭಾವಾನಾತ್ಮಕ ನಂಟು
ಶಿಗ್ಗಾವಿಯೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದೆ. ಎಲ್ಲಾ ತಾಲ್ಲೂಕುಗಳ ಅಭಿವೃದ್ಧಿ ಜತೆಗೆ ಶಿಗ್ಗಾವಿ ಅಭಿವೃದ್ಧಿಗೂ ಒತ್ತು ನೀಡುತ್ತೇನೆ. ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ಈಗಲೇ ನಾನು ಹೇಳಲು ಆಗಲ್ಲ. ಆ ಸಂದರ್ಭದಲ್ಲಿ ಜನರ ಅಭಿಪ್ರಾಯ, ಪಕ್ಷದ ಕೇಳಬೇಕು ಎಂದು ಹೇಳಿದರು.
ಮಾಜಿ ಶಾಸಕ ನೆಹರು ಓಲೇಕಾರ ಅವರ ಮನವೊಲಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಕೆಟ್ ಸಿಕ್ಕಿದ ನಂತರ ಜಿಲ್ಲೆಗೆ ಮೊದಲ ಬಾರಿಗೆ ಬಂದಿದ್ದೇನೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ, ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನಗೆ ಯಾರ ಬಗ್ಗೆಯೂ ದ್ವೇಷ ಇಲ್ಲ ಎಂದರು.
ಸಾಮಾನ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ನೇರ ಸ್ಪರ್ಧೆ ಇರುತ್ತದೆ. ನಾನು ಯಾವುದೇ ಸ್ಪರ್ಧಿಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಪ್ರತಿಸ್ಪರ್ಧಿಯನ್ನು ಗೌರವವಾಗಿ ತೆಗೆದುಕೊಳ್ಳುತ್ತೇನೆ ಎಂದರು.