‘ಖಾದರಬಾಗ ಬಡಾವಣೆ ನಿವಾಸಿ ದಾವಲ್ ಮಲ್ಲಿಕ್ ಎಂಬಾತ ಎಂಟು ವರ್ಷಗಳ ಹಿಂದೆ ಆಯಿಶಾ ಅವರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ನಂತರ ಮದುವೆ ಮಾಡಿಕೊಳ್ಳಬೇಕಾದರೆ ₹ 1 ಲಕ್ಷ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದಾನೆ. ನಂತರ ಮಹಿಳೆಯಿಂದ ₹ 50 ಸಾವಿರ ಪಡೆದ ದಾವಲ್ ಮಲ್ಲಿಕ್ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆತನ ಕುಟುಂಬಸ್ಥರು ಆಯಿಶಾ ಅವರನ್ನು ಮನೆಯೊಳಗೆ ಕರೆದುಕೊಳ್ಳದೆ, ನ್ಯಾಯ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಅಹಮದ್ ಬೀ ಎಂಬಾತ ಆಯಿಶಾ ಅವರ ಕುತ್ತಿಗೆಗೆ ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.