<p><strong>ಹಾವೇರಿ:</strong> ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೊಟ್ಟಿಹಾಳ ಬಳಿ ತುಂಗಭದ್ರಾ ನದಿಯ ನೀರಿನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.</p><p>ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಬುಧವಾರ ತುಂಗಭದ್ರಾ ನದಿಗೆ ಬಂದಿದ್ದರು. ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.</p><p>ಬಟ್ಟೆ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ನದಿ ನೀರಿನಲ್ಲಿ ಬಿದ್ದಿದ್ದರು. ನೀರಿನಲ್ಲಿ ತೇಲಿಕೊಂಡು ಹೋಗಿದ್ದರು. ಅದೇ ನೀರಿನಲ್ಲಿ ಮರದ ಅವಶೇಷವಿತ್ತು. ಅದು ನದಿಯ ಮಧ್ಯದ ಕಲ್ಲಿನಲ್ಲಿ ಸಿಲುಕಿಕೊಂಡಿತ್ತು. ಅದೇ ಅವಶೇಷ ಹಿಡಿದುಕೊಂಡಿದ್ದ ಮಹಿಳೆ, ಇಡೀ ರಾತ್ರಿ ಅದೇ ಸ್ಥಳದಲ್ಲಿದ್ದರು.</p><p>ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ, ಕತ್ತಲು ಇದ್ದಿದ್ದರಿಂದ ರಕ್ಷಣೆಗೆ ಸಾಧ್ಯವಾಗಿರಲಿಲ್ಲ.</p><p>ಗುರುವಾರ ನಸುಕಿನಲ್ಲಿ ಕಾರ್ಯಾಚರಣೆ ನಡೆಸಿ ದೋಣಿ ಮೂಲಕ ಮಹಿಳೆಯನ್ನು ರಕ್ಷಿಸಿ ದಡಕ್ಕೆ ಕರೆತರಲಾಗಿದೆ. ಅಸ್ವಸ್ಥಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೊಟ್ಟಿಹಾಳ ಬಳಿ ತುಂಗಭದ್ರಾ ನದಿಯ ನೀರಿನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.</p><p>ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಬುಧವಾರ ತುಂಗಭದ್ರಾ ನದಿಗೆ ಬಂದಿದ್ದರು. ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.</p><p>ಬಟ್ಟೆ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ನದಿ ನೀರಿನಲ್ಲಿ ಬಿದ್ದಿದ್ದರು. ನೀರಿನಲ್ಲಿ ತೇಲಿಕೊಂಡು ಹೋಗಿದ್ದರು. ಅದೇ ನೀರಿನಲ್ಲಿ ಮರದ ಅವಶೇಷವಿತ್ತು. ಅದು ನದಿಯ ಮಧ್ಯದ ಕಲ್ಲಿನಲ್ಲಿ ಸಿಲುಕಿಕೊಂಡಿತ್ತು. ಅದೇ ಅವಶೇಷ ಹಿಡಿದುಕೊಂಡಿದ್ದ ಮಹಿಳೆ, ಇಡೀ ರಾತ್ರಿ ಅದೇ ಸ್ಥಳದಲ್ಲಿದ್ದರು.</p><p>ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ, ಕತ್ತಲು ಇದ್ದಿದ್ದರಿಂದ ರಕ್ಷಣೆಗೆ ಸಾಧ್ಯವಾಗಿರಲಿಲ್ಲ.</p><p>ಗುರುವಾರ ನಸುಕಿನಲ್ಲಿ ಕಾರ್ಯಾಚರಣೆ ನಡೆಸಿ ದೋಣಿ ಮೂಲಕ ಮಹಿಳೆಯನ್ನು ರಕ್ಷಿಸಿ ದಡಕ್ಕೆ ಕರೆತರಲಾಗಿದೆ. ಅಸ್ವಸ್ಥಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>