<p><strong>ಹಾವೇರಿ:</strong> ‘ಶಿಗ್ಗಾವಿ ಹಂಡ್ರೆಡ್ ಪರ್ಸೆಂಟ್ ಕಾಂಗ್ರೆಸ್ ಗೆಲ್ಲುವ ಕ್ಷೇತ್ರ. ಸಿಎಂ ವಿರುದ್ಧ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು.</p>.<p>‘ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿನಯ ಕುಲಕರ್ಣಿ ಸ್ಪರ್ಧಿಸಲಿದ್ದಾರೆ’ ಎನ್ನುವ ಚರ್ಚೆಯ ಬೆನ್ನಲ್ಲೇ ಸವಣೂರಿನ ದೊಡ್ಡ ಹುಣಸೆಮಠಕ್ಕೆ ಸೋಮವಾರ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಹೈಕಮಾಂಡ್ ನನ್ನ ಜೊತೆ ಮಾತನಾಡಿದೆ. ಶಿಗ್ಗಾವಿಗೆ ನಾನು ಅರ್ಜಿ ಹಾಕಿಲ್ಲ. ಹೈಕಮಾಂಡ್ ಸ್ಪರ್ಧಿಸುವಂತೆ ಹೇಳಿದೆ. ಆದರೆ ನಾನು ಹೈಕಮಾಂಡ್ ಗೆ ಭರವಸೆ ಕೊಟ್ಟಿಲ್ಲ’ ಎಂದರು.</p>.<p>‘ಶಿಗ್ಗಾವಿ ಟಾರ್ಗೆಟ್ ಮಾಡ್ತಿಲ್ಲ. ಯಾವುದೇ ಕ್ಷೇತ್ರದಲ್ಲಿ ನಿಂತರೂ ರಾಜಕಾರಣ ಮಾಡುತ್ತೇವೆ. ಅಷ್ಟಕ್ಕೂ ನನಗೆ ನನ್ನ ಕ್ಷೇತ್ರವಿದೆ; ದುರಾಸೆ ಇಲ್ಲ’ ಎಂದು ಹೇಳಿದರು. ‘ನಾನು ಧಾರವಾಡಕ್ಕೆ ಹೋಗಲು ಸರ್ಕಾರ ಸಾಕಷ್ಟು ಅಡ್ಡಿಪಡಿಸಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ದಮನ ಆಗುತ್ತಿದೆ. ಇತ್ತೀಚಿನ ರಾಹುಲ್ ಗಾಂಧಿಯವರ ಮೇಲಿನ ಪ್ರಕರಣ ನೋಡಿದರೆ ರಾಜ ಕಾರಣ ಬೇಡವೆನಿಸುತ್ತಿದೆ. ಆದಾಗ್ಯೂ ನಮ್ಮ ಜನರಿಗಾಗಿ ರಾಜಕಾರಣ ಮಾಡಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಶಿಗ್ಗಾವಿ ಹಂಡ್ರೆಡ್ ಪರ್ಸೆಂಟ್ ಕಾಂಗ್ರೆಸ್ ಗೆಲ್ಲುವ ಕ್ಷೇತ್ರ. ಸಿಎಂ ವಿರುದ್ಧ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು.</p>.<p>‘ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿನಯ ಕುಲಕರ್ಣಿ ಸ್ಪರ್ಧಿಸಲಿದ್ದಾರೆ’ ಎನ್ನುವ ಚರ್ಚೆಯ ಬೆನ್ನಲ್ಲೇ ಸವಣೂರಿನ ದೊಡ್ಡ ಹುಣಸೆಮಠಕ್ಕೆ ಸೋಮವಾರ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಹೈಕಮಾಂಡ್ ನನ್ನ ಜೊತೆ ಮಾತನಾಡಿದೆ. ಶಿಗ್ಗಾವಿಗೆ ನಾನು ಅರ್ಜಿ ಹಾಕಿಲ್ಲ. ಹೈಕಮಾಂಡ್ ಸ್ಪರ್ಧಿಸುವಂತೆ ಹೇಳಿದೆ. ಆದರೆ ನಾನು ಹೈಕಮಾಂಡ್ ಗೆ ಭರವಸೆ ಕೊಟ್ಟಿಲ್ಲ’ ಎಂದರು.</p>.<p>‘ಶಿಗ್ಗಾವಿ ಟಾರ್ಗೆಟ್ ಮಾಡ್ತಿಲ್ಲ. ಯಾವುದೇ ಕ್ಷೇತ್ರದಲ್ಲಿ ನಿಂತರೂ ರಾಜಕಾರಣ ಮಾಡುತ್ತೇವೆ. ಅಷ್ಟಕ್ಕೂ ನನಗೆ ನನ್ನ ಕ್ಷೇತ್ರವಿದೆ; ದುರಾಸೆ ಇಲ್ಲ’ ಎಂದು ಹೇಳಿದರು. ‘ನಾನು ಧಾರವಾಡಕ್ಕೆ ಹೋಗಲು ಸರ್ಕಾರ ಸಾಕಷ್ಟು ಅಡ್ಡಿಪಡಿಸಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ದಮನ ಆಗುತ್ತಿದೆ. ಇತ್ತೀಚಿನ ರಾಹುಲ್ ಗಾಂಧಿಯವರ ಮೇಲಿನ ಪ್ರಕರಣ ನೋಡಿದರೆ ರಾಜ ಕಾರಣ ಬೇಡವೆನಿಸುತ್ತಿದೆ. ಆದಾಗ್ಯೂ ನಮ್ಮ ಜನರಿಗಾಗಿ ರಾಜಕಾರಣ ಮಾಡಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>