<p><strong>ರಟ್ಟೀಹಳ್ಳಿ</strong>: ನಿತ್ಯ ದುಡಿಯುವ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು. ಕಾಲಕಾಲಕ್ಕೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದು ನರೇಗಾ ಯೋಜನಾಧಿಕಾರಿ ಪ್ರದೀಪ ಗಣೇಶ್ಕರ ಹೇಳಿದರು.</p>.<p>ಅವರು ಬುಧವಾರ ತಾಲ್ಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕಾರ್ಮಿಕರು ದೈಹಿಕವಾಗಿ ಆರೋಗ್ಯವಂತರಾಗಿರಲು ಅಗತ್ಯ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.</p>.<p>ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿಯೂ ನರೇಗಾ ಕಾರ್ಮಿಕರಿಗೆ ಕೆಲಸವನ್ನು ನೀಡುತ್ತಿದ್ದು, ದಿನಕ್ಕೆ ₹ 370 ನಂತೆ ಪಾವತಿ ಮಾಡಲಾಗುತ್ತಿದೆ. ಮಹಿಳಾ ಕಾರ್ಮಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಿಕೊಳ್ಳಬೇಕು ಎಂದರು.</p>.<p>ಈ ವೇಳೆ ನೂರಕ್ಕೂ ಅಧಿಕ ಕಾರ್ಮಿಕರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು. ಅಗತ್ಯ ವೈದ್ಯಕೀಯ ಚಿಕಿತ್ಸಾ ಸಲಹೆ ನೀಡಲಾಯಿತು. ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ನಿತ್ಯ ದುಡಿಯುವ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು. ಕಾಲಕಾಲಕ್ಕೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದು ನರೇಗಾ ಯೋಜನಾಧಿಕಾರಿ ಪ್ರದೀಪ ಗಣೇಶ್ಕರ ಹೇಳಿದರು.</p>.<p>ಅವರು ಬುಧವಾರ ತಾಲ್ಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕಾರ್ಮಿಕರು ದೈಹಿಕವಾಗಿ ಆರೋಗ್ಯವಂತರಾಗಿರಲು ಅಗತ್ಯ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.</p>.<p>ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿಯೂ ನರೇಗಾ ಕಾರ್ಮಿಕರಿಗೆ ಕೆಲಸವನ್ನು ನೀಡುತ್ತಿದ್ದು, ದಿನಕ್ಕೆ ₹ 370 ನಂತೆ ಪಾವತಿ ಮಾಡಲಾಗುತ್ತಿದೆ. ಮಹಿಳಾ ಕಾರ್ಮಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಿಕೊಳ್ಳಬೇಕು ಎಂದರು.</p>.<p>ಈ ವೇಳೆ ನೂರಕ್ಕೂ ಅಧಿಕ ಕಾರ್ಮಿಕರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು. ಅಗತ್ಯ ವೈದ್ಯಕೀಯ ಚಿಕಿತ್ಸಾ ಸಲಹೆ ನೀಡಲಾಯಿತು. ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>