<p><strong>ಹಾವೇರಿ:</strong> ‘ಅರಿಯರ್ಸ್’ ಅನ್ನು ನೀಡದ ಕಾರಣಕ್ಕೆತಾಲ್ಲೂಕಿನ ಸಂಗೂರು ಗ್ರಾಮದ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯಸ್ವಯಂ ನಿವೃತ್ತಿ ಪಡೆದ ಕಾರ್ಮಿಕರು ಶುಕ್ರವಾರ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರನ್ನು ಕೂಡಿಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಮಗೆ ಬರಬೇಕಾದ ಬಾಕಿ ವೇತನವನ್ನು ಕೊಡಿ ಎಂದು ಆಗ್ರಹಿಸಿದ ವೇಳೆ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಸ್ವಯಂ ನಿವೃತ್ತಿ ಪಡೆದಿದ್ದ ಕಾರ್ಮಿಕರು ಹಲವಾರು ವರ್ಷಗಳಿಂದ ಬರಬೇಕಿದ್ದ ವೇತನ ನೀಡುವಂತೆ ಆಗ್ರಹಿಸಿದರೂ ಸಹ ಬಾಕಿ ವೇತನ ನೀಡದಸಂಗೂರು ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ನಾಗಪ್ಪ ಕುಮ್ಮೂರು, ಅಧ್ಯಕ್ಷ ಗುರುನಾಥ್ ದೇಶಪಾಂಡೆ ಅವರನ್ನು ಕೂಡಿ ಹಾಕಿ ಕಚೇರಿಗೆ ಬೀಗ ಜಡಿದರು.</p>.<p>ಈ ವೇಳೆ ಅಧಿಕಾರಿ ಹಾಗೂ ಆಡಳಿತ ಮಂಡಳಿಯವರು ಬಾಕಿ ವೇತನದ ಚೆಕ್ ಕೊಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಅರಿಯರ್ಸ್’ ಅನ್ನು ನೀಡದ ಕಾರಣಕ್ಕೆತಾಲ್ಲೂಕಿನ ಸಂಗೂರು ಗ್ರಾಮದ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯಸ್ವಯಂ ನಿವೃತ್ತಿ ಪಡೆದ ಕಾರ್ಮಿಕರು ಶುಕ್ರವಾರ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರನ್ನು ಕೂಡಿಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಮಗೆ ಬರಬೇಕಾದ ಬಾಕಿ ವೇತನವನ್ನು ಕೊಡಿ ಎಂದು ಆಗ್ರಹಿಸಿದ ವೇಳೆ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಸ್ವಯಂ ನಿವೃತ್ತಿ ಪಡೆದಿದ್ದ ಕಾರ್ಮಿಕರು ಹಲವಾರು ವರ್ಷಗಳಿಂದ ಬರಬೇಕಿದ್ದ ವೇತನ ನೀಡುವಂತೆ ಆಗ್ರಹಿಸಿದರೂ ಸಹ ಬಾಕಿ ವೇತನ ನೀಡದಸಂಗೂರು ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ನಾಗಪ್ಪ ಕುಮ್ಮೂರು, ಅಧ್ಯಕ್ಷ ಗುರುನಾಥ್ ದೇಶಪಾಂಡೆ ಅವರನ್ನು ಕೂಡಿ ಹಾಕಿ ಕಚೇರಿಗೆ ಬೀಗ ಜಡಿದರು.</p>.<p>ಈ ವೇಳೆ ಅಧಿಕಾರಿ ಹಾಗೂ ಆಡಳಿತ ಮಂಡಳಿಯವರು ಬಾಕಿ ವೇತನದ ಚೆಕ್ ಕೊಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>