<p><strong>ಬ್ಯಾಡಗಿ</strong>: ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗ ಎಣಿಸಿಕೊಂಡಿರುವ ಫಾರ್ಮಸಿ ವಿಭಾಗ ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿದೆ ಎಂದು ಔಷಧ ಮಾರಾಟಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ಚೂರಿ ಹೇಳಿದರು.</p>.<p>ತಾಲ್ಲೂಕಿನ ಮೋಟಬೆನ್ನೂರು ಗ್ರಾಮದ ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಔಷಧ ವಿಜ್ಞಾನ (ಫಾರ್ಮಸಿ) ಕಾಲೇಜಿನಲ್ಲಿ ‘ವಿಶ್ವ ಫಾರ್ಮಸಿ‘ ದಿನದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೋಗಿಗೆ ವೈದ್ಯರು ಎಷ್ಟು ಮುಖ್ಯವೋ, ಫಾರ್ಮಸಿ ವಿಭಾಗವೂ ಅಷ್ಟೇ ಮುಖ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಿ ಬಲಪಡಿಸುವಲ್ಲಿ ಫಾರ್ಮಸಿಸ್ಟ್ಗಳ ಪಾತ್ರ ಪ್ರಮುಖವಾಗಿದೆ ಎಂದರು.</p>.<p>ಪ್ರಾಚಾರ್ಯ ರೇಣುಕಾರಾಧ್ಯ ಚಿತ್ತಿ, ಬಿ.ಇಡಿ ಕಾಲೇಜು ಪ್ರಾಚಾರ್ಯ ಸುರೇಶ ಎಂ ಮಾತನಾಡಿದರು. ಶಿವರಾಜ ಚೂರಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಜಾಗೃತಿ ಜಾಥಾ: ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಫಾರ್ಮಸಿಟ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಿದರು. ಕಾಲೇಜಿನಿಂದ ಬಸ್ ನಿಲ್ದಾಣದವರೆಗೆ ಸಾಗಿದ ಅವರು ಔಷಧಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗ ಎಣಿಸಿಕೊಂಡಿರುವ ಫಾರ್ಮಸಿ ವಿಭಾಗ ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿದೆ ಎಂದು ಔಷಧ ಮಾರಾಟಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ಚೂರಿ ಹೇಳಿದರು.</p>.<p>ತಾಲ್ಲೂಕಿನ ಮೋಟಬೆನ್ನೂರು ಗ್ರಾಮದ ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಔಷಧ ವಿಜ್ಞಾನ (ಫಾರ್ಮಸಿ) ಕಾಲೇಜಿನಲ್ಲಿ ‘ವಿಶ್ವ ಫಾರ್ಮಸಿ‘ ದಿನದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೋಗಿಗೆ ವೈದ್ಯರು ಎಷ್ಟು ಮುಖ್ಯವೋ, ಫಾರ್ಮಸಿ ವಿಭಾಗವೂ ಅಷ್ಟೇ ಮುಖ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಿ ಬಲಪಡಿಸುವಲ್ಲಿ ಫಾರ್ಮಸಿಸ್ಟ್ಗಳ ಪಾತ್ರ ಪ್ರಮುಖವಾಗಿದೆ ಎಂದರು.</p>.<p>ಪ್ರಾಚಾರ್ಯ ರೇಣುಕಾರಾಧ್ಯ ಚಿತ್ತಿ, ಬಿ.ಇಡಿ ಕಾಲೇಜು ಪ್ರಾಚಾರ್ಯ ಸುರೇಶ ಎಂ ಮಾತನಾಡಿದರು. ಶಿವರಾಜ ಚೂರಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಜಾಗೃತಿ ಜಾಥಾ: ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಫಾರ್ಮಸಿಟ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಿದರು. ಕಾಲೇಜಿನಿಂದ ಬಸ್ ನಿಲ್ದಾಣದವರೆಗೆ ಸಾಗಿದ ಅವರು ಔಷಧಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>