<p>ಹಾನಗಲ್: ‘ಚಿತ್ರದುರ್ಗದಲ್ಲಿ ಮೇ 9ರಂದು ‘ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ’ ಸಮಾರಂಭ ಜರುಗಲಿದೆ. ಈ ಸಮಾರಂಭಕ್ಕೆ ಮಠಾಧೀಶರನ್ನು ಆಮಂತ್ರಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಅಕ್ಕಿಆಲೂರಿಗೆ ಆಗಮಿಸಿದ್ದರು.</p>.<p>ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಸ್ವಾಮೀಜಿ ಮತ್ತು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮುತ್ತಿನಕಂತಿಮಠದಲ್ಲಿ ಸೇರಿದ್ದ ಸುಮಾರು 25 ಮಠಾಧೀಶರನ್ನು ಭೇಟಿ ಮಾಡಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದರು.</p>.<p>ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕಮಡೊಳ್ಳಿ, ಮುಖಂಡರಾದ ಶಿವರಾಜ ಸಜ್ಜನರ, ರಾಜಶೇಖರ ಕಟ್ಟೆಗೌಡ್ರ, ಭೋಜರಾಜ ಕರೂದಿ, ರಾಜಣ್ಣ ಗೌಳಿ, ಶಿವಕುಮಾರ ದೇಶಮುಖ, ಮಾಲತೇಶ ಸೊಪ್ಪಿನ, ಸಿದ್ಲಿಂಗಪ್ಪ ಶಂಕ್ರಿಕೊಪ್ಪ, ಕೃಷ್ಣ ಈಳಿಗೇರ ಇದ್ದರು.</p>.<p>ಪೂರ್ವಭಾವಿ ಸಭೆ: ಅಭಿಮಾನೋತ್ಸವಕ್ಕೆ ತೆರಳುವ ಬಗ್ಗೆ ಚರ್ಚಿಸಲು ಉದಾಸಿ ಕಲ್ಯಾಣ ಮಂಟಪದಲ್ಲಿ ಮುಖಂಡ ಬಿ.ಸಿ.ಪಾಟೀಲ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. 25 ಸಾರಿಗೆ ಬಸ್ ಮತ್ತು 100 ಕಾರುಗಳಲ್ಲಿ 5 ಸಾವಿರ ಜನ ತೆರಳಲು ತೀರ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-22-1625241398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ‘ಚಿತ್ರದುರ್ಗದಲ್ಲಿ ಮೇ 9ರಂದು ‘ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ’ ಸಮಾರಂಭ ಜರುಗಲಿದೆ. ಈ ಸಮಾರಂಭಕ್ಕೆ ಮಠಾಧೀಶರನ್ನು ಆಮಂತ್ರಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಅಕ್ಕಿಆಲೂರಿಗೆ ಆಗಮಿಸಿದ್ದರು.</p>.<p>ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಸ್ವಾಮೀಜಿ ಮತ್ತು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮುತ್ತಿನಕಂತಿಮಠದಲ್ಲಿ ಸೇರಿದ್ದ ಸುಮಾರು 25 ಮಠಾಧೀಶರನ್ನು ಭೇಟಿ ಮಾಡಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದರು.</p>.<p>ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕಮಡೊಳ್ಳಿ, ಮುಖಂಡರಾದ ಶಿವರಾಜ ಸಜ್ಜನರ, ರಾಜಶೇಖರ ಕಟ್ಟೆಗೌಡ್ರ, ಭೋಜರಾಜ ಕರೂದಿ, ರಾಜಣ್ಣ ಗೌಳಿ, ಶಿವಕುಮಾರ ದೇಶಮುಖ, ಮಾಲತೇಶ ಸೊಪ್ಪಿನ, ಸಿದ್ಲಿಂಗಪ್ಪ ಶಂಕ್ರಿಕೊಪ್ಪ, ಕೃಷ್ಣ ಈಳಿಗೇರ ಇದ್ದರು.</p>.<p>ಪೂರ್ವಭಾವಿ ಸಭೆ: ಅಭಿಮಾನೋತ್ಸವಕ್ಕೆ ತೆರಳುವ ಬಗ್ಗೆ ಚರ್ಚಿಸಲು ಉದಾಸಿ ಕಲ್ಯಾಣ ಮಂಟಪದಲ್ಲಿ ಮುಖಂಡ ಬಿ.ಸಿ.ಪಾಟೀಲ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. 25 ಸಾರಿಗೆ ಬಸ್ ಮತ್ತು 100 ಕಾರುಗಳಲ್ಲಿ 5 ಸಾವಿರ ಜನ ತೆರಳಲು ತೀರ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-22-1625241398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>