<p><strong>ಹಾವೇರಿ:</strong> ‘ಹಾವೇರಿ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಕಿರುಕುಳ ಹೆಚ್ಚಾಗಿದೆ’ ಎಂದು ಶಿಗ್ಗಾವಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಆರೋಪಿಸಿದ್ದಾರೆ.</p><p>ಸಚಿವ ಸ್ಥಾನದ ಆಕಾಂಕ್ಷಿಗಳ ಜೊತೆಯಲ್ಲಿ ನವದೆಹಲಿಗೆ ಹೋಗಿರುವ ಪಠಾಣ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಎದುರು ಅಳಲು ತೋಡಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ವೇಣುಗೋಪಾಲ್, ಅದನ್ನು ಮುಗಿಸಿ ಕಾರಿನಲ್ಲಿ ಕುಳಿತು ವಾಪಸು ಹೊರಟಿದ್ದರು. ಕಾರಿನ ಪಕ್ಕದಲ್ಲಿ ನಿಂತು ವೇಣುಗೋಪಾಲ್ ಜೊತೆ ಮಾತನಾಡಿದ್ದ ಪಠಾಣ, ‘ಹಾವೇರಿ ಜಿಲ್ಲೆಯಿಂದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ಸಚಿವ ಸ್ಥಾನ ನೀಡಿ’ ಎಂದು ಕೋರಿದ್ದಾರೆ.</p><p>‘ಸರ್. ನಾವು ಹಾವೇರಿಯಿಂದ ನಾಲ್ಕು ಜನ ಶಾಸಕರು ಒಟ್ಟಿಗೆ ಬಂದಿದ್ದೇವೆ. ಪ್ರಕಾಶಣ್ಣ (ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ) ಹಾಗೂ ಎಲ್ಲರೂ ಇದ್ದೇವೆ. ದಯವಿಟ್ಟು ಶ್ರೀನಿವಾಸ್ ಮಾನೆ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಿ. ಜಿಲ್ಲೆಯಲ್ಲಿ ಪ್ರಲ್ಹಾದ್ ಜೋಶಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಕಿರುಕುಳ ಹೆಚ್ಚಾಗಿದೆ’ ಎಂದು ಪಠಾಣ ಅವರು ವೇಣುಗೋಪಾಲ್ ಎದುರು ದೂರಿದ್ದಾರೆ.</p><p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಹಾವೇರಿ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಕಿರುಕುಳ ಹೆಚ್ಚಾಗಿದೆ’ ಎಂದು ಶಿಗ್ಗಾವಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಆರೋಪಿಸಿದ್ದಾರೆ.</p><p>ಸಚಿವ ಸ್ಥಾನದ ಆಕಾಂಕ್ಷಿಗಳ ಜೊತೆಯಲ್ಲಿ ನವದೆಹಲಿಗೆ ಹೋಗಿರುವ ಪಠಾಣ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಎದುರು ಅಳಲು ತೋಡಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ವೇಣುಗೋಪಾಲ್, ಅದನ್ನು ಮುಗಿಸಿ ಕಾರಿನಲ್ಲಿ ಕುಳಿತು ವಾಪಸು ಹೊರಟಿದ್ದರು. ಕಾರಿನ ಪಕ್ಕದಲ್ಲಿ ನಿಂತು ವೇಣುಗೋಪಾಲ್ ಜೊತೆ ಮಾತನಾಡಿದ್ದ ಪಠಾಣ, ‘ಹಾವೇರಿ ಜಿಲ್ಲೆಯಿಂದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ಸಚಿವ ಸ್ಥಾನ ನೀಡಿ’ ಎಂದು ಕೋರಿದ್ದಾರೆ.</p><p>‘ಸರ್. ನಾವು ಹಾವೇರಿಯಿಂದ ನಾಲ್ಕು ಜನ ಶಾಸಕರು ಒಟ್ಟಿಗೆ ಬಂದಿದ್ದೇವೆ. ಪ್ರಕಾಶಣ್ಣ (ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ) ಹಾಗೂ ಎಲ್ಲರೂ ಇದ್ದೇವೆ. ದಯವಿಟ್ಟು ಶ್ರೀನಿವಾಸ್ ಮಾನೆ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಿ. ಜಿಲ್ಲೆಯಲ್ಲಿ ಪ್ರಲ್ಹಾದ್ ಜೋಶಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಕಿರುಕುಳ ಹೆಚ್ಚಾಗಿದೆ’ ಎಂದು ಪಠಾಣ ಅವರು ವೇಣುಗೋಪಾಲ್ ಎದುರು ದೂರಿದ್ದಾರೆ.</p><p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>