‘ಯೋಗಾಸನವು ಮನುಷ್ಯನ ಶರೀರದ ರಚನಾ ಶಾಸ್ತ್ರದ ವೈಜ್ಞಾನಿಕ ಆಧಾರದ ಮೇಲೆ ನಿಂತಿದೆ. ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಸಾವಿರಾರು ವರ್ಷಗಳಿಂದ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ ಯೋಗ ವಿದ್ಯೆಯು ಋಷಿಮುನಿಗಳ ಸಾಧಕರಿಂದ ದೊರೆತ ಜೀವನ ಶೈಲಿಯಾಗಿ ಹರಿದುಬಂದಿದೆ’ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.