ಜಿಲ್ಲೆಯ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಚೇರಿಗೆ ಸರಿಯಾದ ವೇಳೆಗೆ ಬರುತ್ತಿಲ್ಲ, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಜನರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡುತ್ತಿಲ್ಲ ಎಂಬ ಸಾರ್ವಜನಿಕರ ದೂರುಗಳನ್ನು ಆಧರಿಸಿ, ‘ಪ್ರಜಾವಾಣಿ’ಯಲ್ಲಿ ‘ಗ್ರಾಮಸ್ಥರಿಗೆ ಸಿಗದ ಪಿಡಿಒ; ತಪ್ಪದ ಅಲೆದಾಟ’ ಎಂಬ ಶೀರ್ಷಿಕೆಯಡಿ ‘ನಮ್ಮ ಜನ ನಮ್ಮ ಧ್ವನಿ’ ಅಂಕಣದ ಮೂಲಕ ಬೆಳಕು ಚೆಲ್ಲಲಾಗಿತ್ತು.