<p><strong>ರಾಣೆಬೆನ್ನೂರು:</strong> `ಚುನಾವಣೆಯಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಚುನಾವಣೆಯಲ್ಲಿ ಆಶೀರ್ವದಿಸಿದ್ದು, ಅಭಿವೃದ್ಧಿಯಲ್ಲಿ ಜಾತಿ, ಧರ್ಮ ನೋಡದೇ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ' ಎಂದು ಶಾಸಕ ಕೆ.ಬಿ.ಕೋಳಿವಾಡ ಹೇಳಿದರು.<br /> <br /> ನಗರದ ಶಿಕ್ಷಕರ ಸಮುದಾಯ ಭವನದಲ್ಲಿ ಭಾವಸಾರ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಾವಸಾರ ಕ್ಷತ್ರೀಯ ಕ್ಷೇಮಾಭಿವೃದ್ಧಿ ಮಹಿಳಾ ಮಂಡಳಿ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಯಾವುದೇ ಒಂದು ಸಮಾಜ ಮುಂದುವರಿಯಬೇಕಾದರೆ ಆ ಸಮಾಜದವರು ವಿದ್ಯಾವಂತರಾಗಿ ಸರ್ಕಾರದ ಯೋಜನೆಗಳನ್ನು ಸದೋಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು' ಎಂದರು.<br /> <br /> `ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ನೀಡಿ ಎಂದು ಮನವಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ನಿವೇಶನ ನೀಡಲು ಪ್ರಾಮಾಣಿಕ ಪ್ರಯತ್ನಿಸಲಾಗುವುದು' ಎಂದು ಕೋಳಿವಾಡ ಭರವಸೆ ನೀಡಿದರು.<br /> <br /> ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಉಪಾಧ್ಯಕ್ಷ ಜಿ.ಕೆ.ಸತ್ಯ ಮಾತನಾಡಿ, `ಸಮಾಜದ ಜನರು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯ, ಸಮಾಜದ ಜನರು ಸಂಘಟಿತರಾಗಿ ಹೋರಾಟ ನಡೆಸುವುದು ಅವಶ್ಯವಾಗಿದೆ. ಸಮಾಜ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯಲು ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ' ಎಂದು ಹೇಳಿದರು.<br /> <br /> ಸ್ಥಳೀಯ ಭಾವಸಾರ ಕ್ಷತ್ರಿಯ ಕ್ಷೇಮಾಭಿವದ್ಧಿ ಸಂಘದ ಅಧ್ಯಕ್ಷ ರಾಜು.ಡಿ.ಪಿಸೆ, ಜಿ.ಎಸ್.ರಾಮಚಂದ್ರ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ರಾಜ್ಯ ಅಂತರಾಷ್ಟ್ರೀಯ ಭಾವಸಾರ ಮಹಾಸಭೆ ಅಧ್ಯಕ್ಷ ಆರ್.ಡಿ.ಸೀತಾರಾಮರಾವ್, ಶ್ರೀನಿವಾಸ ಕುಂಟೆ, ನಾಗರಾಜ್ರಾವ್ ಬೇಂದ್ರೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> `ಚುನಾವಣೆಯಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಚುನಾವಣೆಯಲ್ಲಿ ಆಶೀರ್ವದಿಸಿದ್ದು, ಅಭಿವೃದ್ಧಿಯಲ್ಲಿ ಜಾತಿ, ಧರ್ಮ ನೋಡದೇ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ' ಎಂದು ಶಾಸಕ ಕೆ.ಬಿ.ಕೋಳಿವಾಡ ಹೇಳಿದರು.<br /> <br /> ನಗರದ ಶಿಕ್ಷಕರ ಸಮುದಾಯ ಭವನದಲ್ಲಿ ಭಾವಸಾರ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಾವಸಾರ ಕ್ಷತ್ರೀಯ ಕ್ಷೇಮಾಭಿವೃದ್ಧಿ ಮಹಿಳಾ ಮಂಡಳಿ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಯಾವುದೇ ಒಂದು ಸಮಾಜ ಮುಂದುವರಿಯಬೇಕಾದರೆ ಆ ಸಮಾಜದವರು ವಿದ್ಯಾವಂತರಾಗಿ ಸರ್ಕಾರದ ಯೋಜನೆಗಳನ್ನು ಸದೋಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು' ಎಂದರು.<br /> <br /> `ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ನೀಡಿ ಎಂದು ಮನವಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ನಿವೇಶನ ನೀಡಲು ಪ್ರಾಮಾಣಿಕ ಪ್ರಯತ್ನಿಸಲಾಗುವುದು' ಎಂದು ಕೋಳಿವಾಡ ಭರವಸೆ ನೀಡಿದರು.<br /> <br /> ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಉಪಾಧ್ಯಕ್ಷ ಜಿ.ಕೆ.ಸತ್ಯ ಮಾತನಾಡಿ, `ಸಮಾಜದ ಜನರು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯ, ಸಮಾಜದ ಜನರು ಸಂಘಟಿತರಾಗಿ ಹೋರಾಟ ನಡೆಸುವುದು ಅವಶ್ಯವಾಗಿದೆ. ಸಮಾಜ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯಲು ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ' ಎಂದು ಹೇಳಿದರು.<br /> <br /> ಸ್ಥಳೀಯ ಭಾವಸಾರ ಕ್ಷತ್ರಿಯ ಕ್ಷೇಮಾಭಿವದ್ಧಿ ಸಂಘದ ಅಧ್ಯಕ್ಷ ರಾಜು.ಡಿ.ಪಿಸೆ, ಜಿ.ಎಸ್.ರಾಮಚಂದ್ರ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ರಾಜ್ಯ ಅಂತರಾಷ್ಟ್ರೀಯ ಭಾವಸಾರ ಮಹಾಸಭೆ ಅಧ್ಯಕ್ಷ ಆರ್.ಡಿ.ಸೀತಾರಾಮರಾವ್, ಶ್ರೀನಿವಾಸ ಕುಂಟೆ, ನಾಗರಾಜ್ರಾವ್ ಬೇಂದ್ರೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>