<p><strong>ಹಿರೇಕೆರೂರ:</strong> ಎಚ್.ಡಿ.ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗೆ ರೂ.19 ಕೋಟಿ ಸೇರಿದಂತೆ ತಾಲ್ಲೂಕಿಗೆ ರೂ.350 ಕೋಟಿ ಅನುದಾನ ನೀಡಿದ್ದರಿಂದ ತಾಲ್ಲೂಕು ಪ್ರಗತಿ ಕಂಡಿದೆ ಎಂದು ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹೇಳಿದರು.</p>.<p>ಪಟ್ಟಣದ ಗುರು ಭವನದಲ್ಲಿ ಶನಿವಾರ ಸಂಜೆ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪರ್ಯಾಯ ಶಕ್ತಿಯಾಗಿದೆ ಎಂದರು.</p>.<p>ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ ಮಾತನಾಡಿ, ರಾಜ್ಯದಲ್ಲಿ ವರ್ಗ ಸಂಘರ್ಷಕ್ಕೆ ನಾಂದಿ ಆಗುವಂಥ ಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ. ಮಠಾಧೀಶ ರಲ್ಲಿಯೂ 2 ಗುಂಪುಗಳಾಗಿ ಭ್ರಷ್ಟರನ್ನು ಬೆಂಬಲಿಸುವ ಮಠಾಧೀಶರೂ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ರಿಯಾಜ್ ಅಹ್ಮದ್ ಫಾರೂಕಿ, ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ಕಾಂಗ್ರೆಸ್ ಪಕ್ಷವೇ ಪ್ರಚಾರ ನಡೆಸುತ್ತಾ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ. ಈ ತಂತ್ರಕ್ಕೆ ದೇಶದ ಮುಸ್ಲಿಮರು ಬಲಿಯಾಗಬಾರದು. ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗಲು ಸಾಧ್ಯವಿಲ್ಲ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಬಸವರಾಜ ಹೊರಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಗೌಡ ಗಾಜಿಗೌಡ್ರ, ಎಚ್.ಎಸ್.ಕೋಣನವರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ:</strong> ಎಚ್.ಡಿ.ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗೆ ರೂ.19 ಕೋಟಿ ಸೇರಿದಂತೆ ತಾಲ್ಲೂಕಿಗೆ ರೂ.350 ಕೋಟಿ ಅನುದಾನ ನೀಡಿದ್ದರಿಂದ ತಾಲ್ಲೂಕು ಪ್ರಗತಿ ಕಂಡಿದೆ ಎಂದು ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹೇಳಿದರು.</p>.<p>ಪಟ್ಟಣದ ಗುರು ಭವನದಲ್ಲಿ ಶನಿವಾರ ಸಂಜೆ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪರ್ಯಾಯ ಶಕ್ತಿಯಾಗಿದೆ ಎಂದರು.</p>.<p>ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ ಮಾತನಾಡಿ, ರಾಜ್ಯದಲ್ಲಿ ವರ್ಗ ಸಂಘರ್ಷಕ್ಕೆ ನಾಂದಿ ಆಗುವಂಥ ಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ. ಮಠಾಧೀಶ ರಲ್ಲಿಯೂ 2 ಗುಂಪುಗಳಾಗಿ ಭ್ರಷ್ಟರನ್ನು ಬೆಂಬಲಿಸುವ ಮಠಾಧೀಶರೂ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ರಿಯಾಜ್ ಅಹ್ಮದ್ ಫಾರೂಕಿ, ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ಕಾಂಗ್ರೆಸ್ ಪಕ್ಷವೇ ಪ್ರಚಾರ ನಡೆಸುತ್ತಾ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ. ಈ ತಂತ್ರಕ್ಕೆ ದೇಶದ ಮುಸ್ಲಿಮರು ಬಲಿಯಾಗಬಾರದು. ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗಲು ಸಾಧ್ಯವಿಲ್ಲ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಬಸವರಾಜ ಹೊರಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಗೌಡ ಗಾಜಿಗೌಡ್ರ, ಎಚ್.ಎಸ್.ಕೋಣನವರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>