<p><strong>ಹಾವೇರಿ:</strong> ‘ನಗರಸಭೆಯ ಶೇ 22 ರ ಅನುದಾನದಡಿ ಮನೆ ನಿರ್ಮಾಣಕ್ಕೆ ಮಂಜೂರಿಯಾದ ಹಣಕ್ಕಿಂತ ಹೆಚ್ಚಿನ ಹಣವನ್ನು ಫಲಾನುಭವಿಗಳಿಗೆ ನೀಡುವ ಮೂಲಕ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆ’ ಎಂದು ನಗರಸಭೆಯ ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.<br /> <br /> ನಗರಸಭೆ ಸದಸ್ಯ ಸುರೇಶ ದೊಡ್ಡಮನಿ ನೇತೃತ್ವದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ನಗರಸಭೆ ಬಿಜೆಪಿ ಸದಸ್ಯರು, ಪ್ರಸಕ್ತ ಸಾಲಿನ ಶೇ 22 ರ ಅನುದಾನದಲ್ಲಿ ಮನೆ ನಿರ್ಮಿಸಿಕೊಳ್ಳಲು 9 ಜನ ಫಲಾನುಭವಿಗಳಿಗೆ ತಲಾ ₨ 70 ಸಾವಿರ ಮಂಜೂರಿ ಮಾಡಲಾಗಿದೆ. ಆದರೆ, ಅಧಿಕಾರಿಯೊಬ್ಬರು ಅಧ್ಯಕ್ಷರ, ಆಯುಕ್ತರ ಹಾಗೂ ಸದಸ್ಯರ ಗಮನಕ್ಕೆ ತಾರದೇ ಇಬ್ಬರು ಫಲಾನುಭವಿಗಳಿಗೆ ₨ 20 ಸಾವಿರ ಹೆಚ್ಚುವರಿಯಾಗಿ ಸಂದಾಯ ಮಾಡಿದ್ದಾರೆ ಎಂದು ಆಪಾದಿಸಿದರು.<br /> <br /> ಈ ಯೋಜನೆಯಲ್ಲಿ ಆಯ್ಕೆಯಾದ ಫಕ್ಕಿರಪ್ಪ ತಳವಾರ ಹಾಗೂ ಪುಟ್ಟಪ್ಪ ತಳವಾರ ಎಂಬ ಫಲಾನುಭವಿಗಳಿಗೆ ಅಧಿಕಾರಿಗಳು ತಲಾ ₨ 20 ಸಾವಿರದಂತೆ ಹೆಚ್ಚುವರಿ ಹಣ ನೀಡಿದ್ದಾರೆ. ಯೋಜನೆಯಲ್ಲಿ ಇದ್ದಕ್ಕಿಂತ ಹೆಚ್ಚಿನ ಹಣವನ್ನು ಯಾವ ಕಾರಣಕ್ಕಾಗಿ ನೀಡಲಾಗಿದೆ ಎಂಬುದು ಮಾತ್ರ ಗೊತ್ತಾಗಿಲ್ಲ.<br /> <br /> ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಮಂಜೂರಾದ ಹಾಗೂ ನೀಡಿರುವ ಹಣದ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರೂ, ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ, ಅಧಿಕಾರಿಗಳು ಅವ್ಯವಹಾರ ನಡೆಸಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.<br /> <br /> ಕೂಡಲೆ ಜಿಲ್ಲಾಧಿಕಾರಿಗಳು ನಗರಸಭೆಗೆ ಭೇಟಿ ನೀಡಿ ಈ ಕುರಿತು ಖುದ್ದು ಪರಿಶೀಲನೆ ನಡೆಸಬೇಕಲ್ಲದೇ, ಅವ್ಯವಹಾರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ನಗರೋತ್ಥಾನ ನೆನಗುದಿಗೆ: ನಗರದಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ನಡೆತಯುತ್ತಿರುವ ಒಳಚರಂಡಿ ಕಾಮಗಾರಿ ಹಾದಿಯಲ್ಲಿಯೇ ನಗರೋತ್ಥಾನ ಯೋಜನೆ ಸಾಗುತ್ತಿದೆ ಎಂದು ನಗರಸಭೆ ಬಿಜೆಪಿ ಸದಸ್ಯರು ಆರೋಪಿಸಿದರು.<br /> <br /> ಒಳಚರಂಡಿ ಕಾಮಗಾರಿ ನಿಂತಲ್ಲೆ ನಿಂತು ಹಲವು ತಿಂಗಳು ಗತಿಸಿವೆ. ಈವರೆಗೆ ಶಾಸಕರಾಗಲಿ, ನಗರಸಭೆ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸದಸ್ಯರಾಗಲಿ ಗಮನ ಹರಿಸಿಲ್ಲ. ಈಗ ಆ ಯೋಜನೆ ಪೂರ್ಣಗೊಳ್ಳುತ್ತದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಅದೇ ಹಾದಿಯಲ್ಲಿ ನಗರೋತ್ಥಾನ ಯೋಜನೆಯೂ ಸಾಗಿದೆ. ಈಗಾಗಲೇ ಯೋಜನೆಯ ಟೆಂಡರ್ ನೀಡಿ ನಾಲ್ಕೈದು ತಿಂಗಳು ಗತಿಸುತ್ತಾ ಬಂದಿದೆ. ಆದರೆ, ಗುತ್ತಿಗೆಗಾರರು ಯಾವುದೇ ಕಾಮಗಾರಿ ಆರಂಭ ಮಾಡಿಲ್ಲ ಎಂದು ದೂರಿದರು.<br /> <br /> ಯೋಜನೆಯ ₨30 ಕೋಟಿ ಅನುದಾನದಲ್ಲಿ ₨ 15–20 ಕೋಟಿಗಳಷ್ಟು ಅನುದಾನವನ್ನು ನಗರದ ರಸ್ತೆಗಳ ಡಾಂಬರೀಕರಣ ನೀಡಲಾಗಿದೆ. ಆದರೆ, ಗುತ್ತಿಗೆದಾರರು ನಗರದಲ್ಲಿ ಡಾಂಬರ್ ಪ್ಲಾಂಟ್ ಹಾಕಿಲ್ಲ. ಯಾವುದೇ ಕಾಮಗಾರಿ ಆರಂಭಿಸಿದಲ್ಲ. ಈಗಾಗಲೇ ಚಳಿಗಾಲ ಮುಗಿಯುವ ಹಂತಕ್ಕೆ ಬಂದಿದೆ. ಯಾವುದಾದೂ ಅಡ್ಡ ಮಳೆ ಬಂದರೆ, ಆ ನೆಪದಲ್ಲಿ ಕಾಮಗಾರಿ ಆರಂಭ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.<br /> <br /> ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ನೀಡಲು ತಂದ ಹೊಲಿಗೆ ಯಂತ್ರಗಳು ನಗರಸಭೆಯಿಂದ ಕಳ್ಳತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಲ್ಲಿ, ಆಯುಕ್ತರಲ್ಲಿ ಮಾಹಿತಿ ಇಲ್ಲದಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.<br /> <br /> ಒಂದು ವಾರದಲ್ಲಿ ತಮ್ಮ ಈ ಎಲ್ಲ ಬೇಡಿಕೆಗಳು ಈಡೇರದಿದ್ದರೆ, ಬಿಜೆಪಿ ಪಕ್ಷದ ವತಿಯಿಂದ ನಗರಸಭೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಹನುಮಂತನಾಯ್ಕ್ ಬದಾಮಿ, ನಿರಂಜನ ಹೆರೂರ, ರೇಣುಕವ್ವ ಪೂಜಾರ, ಗೀತಾ ಜೂಜಗಾಂವ, ಕರಬಸಪ್ಪ ಹಳದೂರ ಅಲ್ಲದೇ ಅನೇಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ನಗರಸಭೆಯ ಶೇ 22 ರ ಅನುದಾನದಡಿ ಮನೆ ನಿರ್ಮಾಣಕ್ಕೆ ಮಂಜೂರಿಯಾದ ಹಣಕ್ಕಿಂತ ಹೆಚ್ಚಿನ ಹಣವನ್ನು ಫಲಾನುಭವಿಗಳಿಗೆ ನೀಡುವ ಮೂಲಕ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆ’ ಎಂದು ನಗರಸಭೆಯ ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.<br /> <br /> ನಗರಸಭೆ ಸದಸ್ಯ ಸುರೇಶ ದೊಡ್ಡಮನಿ ನೇತೃತ್ವದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ನಗರಸಭೆ ಬಿಜೆಪಿ ಸದಸ್ಯರು, ಪ್ರಸಕ್ತ ಸಾಲಿನ ಶೇ 22 ರ ಅನುದಾನದಲ್ಲಿ ಮನೆ ನಿರ್ಮಿಸಿಕೊಳ್ಳಲು 9 ಜನ ಫಲಾನುಭವಿಗಳಿಗೆ ತಲಾ ₨ 70 ಸಾವಿರ ಮಂಜೂರಿ ಮಾಡಲಾಗಿದೆ. ಆದರೆ, ಅಧಿಕಾರಿಯೊಬ್ಬರು ಅಧ್ಯಕ್ಷರ, ಆಯುಕ್ತರ ಹಾಗೂ ಸದಸ್ಯರ ಗಮನಕ್ಕೆ ತಾರದೇ ಇಬ್ಬರು ಫಲಾನುಭವಿಗಳಿಗೆ ₨ 20 ಸಾವಿರ ಹೆಚ್ಚುವರಿಯಾಗಿ ಸಂದಾಯ ಮಾಡಿದ್ದಾರೆ ಎಂದು ಆಪಾದಿಸಿದರು.<br /> <br /> ಈ ಯೋಜನೆಯಲ್ಲಿ ಆಯ್ಕೆಯಾದ ಫಕ್ಕಿರಪ್ಪ ತಳವಾರ ಹಾಗೂ ಪುಟ್ಟಪ್ಪ ತಳವಾರ ಎಂಬ ಫಲಾನುಭವಿಗಳಿಗೆ ಅಧಿಕಾರಿಗಳು ತಲಾ ₨ 20 ಸಾವಿರದಂತೆ ಹೆಚ್ಚುವರಿ ಹಣ ನೀಡಿದ್ದಾರೆ. ಯೋಜನೆಯಲ್ಲಿ ಇದ್ದಕ್ಕಿಂತ ಹೆಚ್ಚಿನ ಹಣವನ್ನು ಯಾವ ಕಾರಣಕ್ಕಾಗಿ ನೀಡಲಾಗಿದೆ ಎಂಬುದು ಮಾತ್ರ ಗೊತ್ತಾಗಿಲ್ಲ.<br /> <br /> ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಮಂಜೂರಾದ ಹಾಗೂ ನೀಡಿರುವ ಹಣದ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರೂ, ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ, ಅಧಿಕಾರಿಗಳು ಅವ್ಯವಹಾರ ನಡೆಸಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.<br /> <br /> ಕೂಡಲೆ ಜಿಲ್ಲಾಧಿಕಾರಿಗಳು ನಗರಸಭೆಗೆ ಭೇಟಿ ನೀಡಿ ಈ ಕುರಿತು ಖುದ್ದು ಪರಿಶೀಲನೆ ನಡೆಸಬೇಕಲ್ಲದೇ, ಅವ್ಯವಹಾರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ನಗರೋತ್ಥಾನ ನೆನಗುದಿಗೆ: ನಗರದಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ನಡೆತಯುತ್ತಿರುವ ಒಳಚರಂಡಿ ಕಾಮಗಾರಿ ಹಾದಿಯಲ್ಲಿಯೇ ನಗರೋತ್ಥಾನ ಯೋಜನೆ ಸಾಗುತ್ತಿದೆ ಎಂದು ನಗರಸಭೆ ಬಿಜೆಪಿ ಸದಸ್ಯರು ಆರೋಪಿಸಿದರು.<br /> <br /> ಒಳಚರಂಡಿ ಕಾಮಗಾರಿ ನಿಂತಲ್ಲೆ ನಿಂತು ಹಲವು ತಿಂಗಳು ಗತಿಸಿವೆ. ಈವರೆಗೆ ಶಾಸಕರಾಗಲಿ, ನಗರಸಭೆ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸದಸ್ಯರಾಗಲಿ ಗಮನ ಹರಿಸಿಲ್ಲ. ಈಗ ಆ ಯೋಜನೆ ಪೂರ್ಣಗೊಳ್ಳುತ್ತದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಅದೇ ಹಾದಿಯಲ್ಲಿ ನಗರೋತ್ಥಾನ ಯೋಜನೆಯೂ ಸಾಗಿದೆ. ಈಗಾಗಲೇ ಯೋಜನೆಯ ಟೆಂಡರ್ ನೀಡಿ ನಾಲ್ಕೈದು ತಿಂಗಳು ಗತಿಸುತ್ತಾ ಬಂದಿದೆ. ಆದರೆ, ಗುತ್ತಿಗೆಗಾರರು ಯಾವುದೇ ಕಾಮಗಾರಿ ಆರಂಭ ಮಾಡಿಲ್ಲ ಎಂದು ದೂರಿದರು.<br /> <br /> ಯೋಜನೆಯ ₨30 ಕೋಟಿ ಅನುದಾನದಲ್ಲಿ ₨ 15–20 ಕೋಟಿಗಳಷ್ಟು ಅನುದಾನವನ್ನು ನಗರದ ರಸ್ತೆಗಳ ಡಾಂಬರೀಕರಣ ನೀಡಲಾಗಿದೆ. ಆದರೆ, ಗುತ್ತಿಗೆದಾರರು ನಗರದಲ್ಲಿ ಡಾಂಬರ್ ಪ್ಲಾಂಟ್ ಹಾಕಿಲ್ಲ. ಯಾವುದೇ ಕಾಮಗಾರಿ ಆರಂಭಿಸಿದಲ್ಲ. ಈಗಾಗಲೇ ಚಳಿಗಾಲ ಮುಗಿಯುವ ಹಂತಕ್ಕೆ ಬಂದಿದೆ. ಯಾವುದಾದೂ ಅಡ್ಡ ಮಳೆ ಬಂದರೆ, ಆ ನೆಪದಲ್ಲಿ ಕಾಮಗಾರಿ ಆರಂಭ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.<br /> <br /> ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ನೀಡಲು ತಂದ ಹೊಲಿಗೆ ಯಂತ್ರಗಳು ನಗರಸಭೆಯಿಂದ ಕಳ್ಳತನವಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಲ್ಲಿ, ಆಯುಕ್ತರಲ್ಲಿ ಮಾಹಿತಿ ಇಲ್ಲದಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.<br /> <br /> ಒಂದು ವಾರದಲ್ಲಿ ತಮ್ಮ ಈ ಎಲ್ಲ ಬೇಡಿಕೆಗಳು ಈಡೇರದಿದ್ದರೆ, ಬಿಜೆಪಿ ಪಕ್ಷದ ವತಿಯಿಂದ ನಗರಸಭೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಹನುಮಂತನಾಯ್ಕ್ ಬದಾಮಿ, ನಿರಂಜನ ಹೆರೂರ, ರೇಣುಕವ್ವ ಪೂಜಾರ, ಗೀತಾ ಜೂಜಗಾಂವ, ಕರಬಸಪ್ಪ ಹಳದೂರ ಅಲ್ಲದೇ ಅನೇಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>