<p>ಬ್ಯಾಡಗಿ: ತಾಲ್ಲೂಕು ಕೇಂದ್ರಗಳಲ್ಲಿರುವ ಕೆಳಹಂತದ ನ್ಯಾಯಾಲಯಗಳನ್ನು ಉನ್ನತೀಕರಿಸುವುದರ ಜೊತೆಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆಯವ್ಯಯದಲ್ಲಿ ಹೆಚ್ಚಿನ ಹಣವನ್ನು ಒದಗಿಸುವಂತೆ ರಾಜ್ಯ ಹೈಕೋರ್ಟ್ ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ಜಾವೇದ್ ರಹೀಂ ಹೇಳಿದರು. <br /> <br /> ಶನಿವಾರ ಇಲ್ಲಿಯ ನ್ಯಾಯಾಲಯ ಆವರಣದಲ್ಲಿ ರೂ.39 ಲಕ್ಷ ವೆಚ್ಚದ ಕೇಂದ್ರ ಅಭಿಲೇಖಾಲಯ ಹಾಗೂ 20 ಲಕ್ಷರೂ ವೆಚ್ಚದ ವಕೀಲರ ಭವನದ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು. ಸದ್ಯ ಸರ್ಕಾರ ನೀಡುತ್ತಿರುವ ಅನುದಾನ ನ್ಯಾಯಾ ಲಯಗಳ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಕಾಗಲಾರದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಕಾನೂನು ಸಚಿವರಲ್ಲಿ ಮನವಿ ಮಾಡಿಕೊಂಡರು. <br /> <br /> ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಚ್ಛ ನ್ಯಾಯಾಲಯದ ಇನೊಬ್ಬ ನ್ಯಾಯಾಧೀಶ ಅಶೋಕ ಹಿಂಚಿಗೇರಿ ಮಾತನಾಡಿ, ವ್ಯಕ್ತಿಯಾದವನು ಅವಕಾಶಕ್ಕಾಗಿ ಎದುರು ನೋಡದೆ ಇದ್ದ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ವಿದೆ ಎಂದರು.</p>.<p><br /> ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕಾನೂನು ಸಚಿವ ಎಸ್. ಸುರೇಶಕುಮಾರ, ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಇ-ವಾಚನಾಲ ಯದ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾ ಲಯಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ಯೋಜನೆಗೆ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚಿಂತನೆ ನಡೆಸಲಾಗುವುದೆಂಬ ಭರವಸೆ ನೀಡಿದರು.<br /> <br /> ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಹೈಕೋರ್ಟ್ ನ್ಯಾಯಾಧೀಶ ಮೋಹನ ಶಾಂತನಗೌಡ್ರ ವಹಿಸಿದ್ದರು.<br /> <br /> ವೇದಿಕೆಯಲ್ಲಿ ಶಾಸಕ ಸುರೇಶಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ರಾಜ್ಯ ವಕೀಲರ ಪರಿಷತ್ ಸದಸ್ಯ ಕೆ.ಶಿವಲಿಂಗಪ್ಪ, ಸ್ಥಳೀಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಬಿ.ಜೆ.ಇ.ಪ್ರಮೋದ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಚೂರಿ, ಕಾರ್ಯದರ್ಶಿ ಎನ್. ಎಂ.ಹುಬ್ಬಳ್ಳಿ ಉಪಸ್ಥಿತರಿದ್ದರು. <br /> <br /> ಭಾರತಿ ಕುಲ್ಕರ್ಣಿ ಹಾಗೂ ಸಂಗಡಿ ಗರು ಪ್ರಾರ್ಥಿಸಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಪಿ. ಸಂದೇಶ ಸ್ವಾಗತಿಸಿದರು. ವಕೀಲ ಎಂ.ಕೆ. ವೀರನಗೌಡ್ರ ಹಾಗೂ ಪಿ.ಸಿ.ಶೀಗಿಹಳ್ಳಿ ನಿರ್ವಹಿಸಿದರು. <br /> <br /> <strong>ಸೋಮಣ್ಣಗೆ ಸನ್ಮಾನ ಇಂದು<br /> ಹಿರೇಕೆರೂರ</strong>: ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿ ತಾಲ್ಲೂಕು ಘಟಕ ದಿಂದ ಆ.6ರಂದು ಬೆಳಿಗ್ಗೆ 11ಕ್ಕೆ ಪಟ್ಟಣದ ಗುರುಭವನದಲ್ಲಿ ಸನ್ಮಾನಿಸ ಲಾಗುವುದು ಎಂದು ಅಧ್ಯಕ್ಷ ಫಾಲಾಕ್ಷ ಗೌಡ ಪಾಟೀಲ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ತಾಲ್ಲೂಕು ಕೇಂದ್ರಗಳಲ್ಲಿರುವ ಕೆಳಹಂತದ ನ್ಯಾಯಾಲಯಗಳನ್ನು ಉನ್ನತೀಕರಿಸುವುದರ ಜೊತೆಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆಯವ್ಯಯದಲ್ಲಿ ಹೆಚ್ಚಿನ ಹಣವನ್ನು ಒದಗಿಸುವಂತೆ ರಾಜ್ಯ ಹೈಕೋರ್ಟ್ ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ಜಾವೇದ್ ರಹೀಂ ಹೇಳಿದರು. <br /> <br /> ಶನಿವಾರ ಇಲ್ಲಿಯ ನ್ಯಾಯಾಲಯ ಆವರಣದಲ್ಲಿ ರೂ.39 ಲಕ್ಷ ವೆಚ್ಚದ ಕೇಂದ್ರ ಅಭಿಲೇಖಾಲಯ ಹಾಗೂ 20 ಲಕ್ಷರೂ ವೆಚ್ಚದ ವಕೀಲರ ಭವನದ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು. ಸದ್ಯ ಸರ್ಕಾರ ನೀಡುತ್ತಿರುವ ಅನುದಾನ ನ್ಯಾಯಾ ಲಯಗಳ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಕಾಗಲಾರದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಕಾನೂನು ಸಚಿವರಲ್ಲಿ ಮನವಿ ಮಾಡಿಕೊಂಡರು. <br /> <br /> ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಚ್ಛ ನ್ಯಾಯಾಲಯದ ಇನೊಬ್ಬ ನ್ಯಾಯಾಧೀಶ ಅಶೋಕ ಹಿಂಚಿಗೇರಿ ಮಾತನಾಡಿ, ವ್ಯಕ್ತಿಯಾದವನು ಅವಕಾಶಕ್ಕಾಗಿ ಎದುರು ನೋಡದೆ ಇದ್ದ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ವಿದೆ ಎಂದರು.</p>.<p><br /> ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕಾನೂನು ಸಚಿವ ಎಸ್. ಸುರೇಶಕುಮಾರ, ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಇ-ವಾಚನಾಲ ಯದ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾ ಲಯಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ಯೋಜನೆಗೆ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚಿಂತನೆ ನಡೆಸಲಾಗುವುದೆಂಬ ಭರವಸೆ ನೀಡಿದರು.<br /> <br /> ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಹೈಕೋರ್ಟ್ ನ್ಯಾಯಾಧೀಶ ಮೋಹನ ಶಾಂತನಗೌಡ್ರ ವಹಿಸಿದ್ದರು.<br /> <br /> ವೇದಿಕೆಯಲ್ಲಿ ಶಾಸಕ ಸುರೇಶಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ರಾಜ್ಯ ವಕೀಲರ ಪರಿಷತ್ ಸದಸ್ಯ ಕೆ.ಶಿವಲಿಂಗಪ್ಪ, ಸ್ಥಳೀಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಬಿ.ಜೆ.ಇ.ಪ್ರಮೋದ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಚೂರಿ, ಕಾರ್ಯದರ್ಶಿ ಎನ್. ಎಂ.ಹುಬ್ಬಳ್ಳಿ ಉಪಸ್ಥಿತರಿದ್ದರು. <br /> <br /> ಭಾರತಿ ಕುಲ್ಕರ್ಣಿ ಹಾಗೂ ಸಂಗಡಿ ಗರು ಪ್ರಾರ್ಥಿಸಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಪಿ. ಸಂದೇಶ ಸ್ವಾಗತಿಸಿದರು. ವಕೀಲ ಎಂ.ಕೆ. ವೀರನಗೌಡ್ರ ಹಾಗೂ ಪಿ.ಸಿ.ಶೀಗಿಹಳ್ಳಿ ನಿರ್ವಹಿಸಿದರು. <br /> <br /> <strong>ಸೋಮಣ್ಣಗೆ ಸನ್ಮಾನ ಇಂದು<br /> ಹಿರೇಕೆರೂರ</strong>: ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿ ತಾಲ್ಲೂಕು ಘಟಕ ದಿಂದ ಆ.6ರಂದು ಬೆಳಿಗ್ಗೆ 11ಕ್ಕೆ ಪಟ್ಟಣದ ಗುರುಭವನದಲ್ಲಿ ಸನ್ಮಾನಿಸ ಲಾಗುವುದು ಎಂದು ಅಧ್ಯಕ್ಷ ಫಾಲಾಕ್ಷ ಗೌಡ ಪಾಟೀಲ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>