<p><strong>ಸವಣೂರ: </strong>`ವಿಶೇಷ ಅಗತ್ಯತೆಯ ಅವಶ್ಯಕತೆ ಇರುವ ಪ್ರತಿಯೊಂದು ಮಗುವೂ ವಿಶೇಷ ಸಾಮರ್ಥ್ಯವನ್ನೂ ಹೊಂದಿರುತ್ತದೆ. ಅದನ್ನು ಗುರುತಿಸಿ ಪ್ರೇರಣೆ ನೀಡುವ ಕಾರ್ಯ ಸಮಾಜದಿಂದ ಆಗಬೇಕಾಗಿದೆ' ಎಂದು ತಾ.ಪಂ ಅಧ್ಯಕ್ಷ ರುದ್ರಗೌಡ ಪಾಟೀಲ ತಿಳಿಸಿದರು.<br /> <br /> ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ದೈಹಿಕ ನ್ಯೂನತೆ ಹೊಂದಿರುವ ಮಕ್ಕಳ ಪಾಲಕರು ಆತಂಕ ಪಡಬೇಕಾಗಿಲ್ಲ. ಸರ್ಕಾರ ಹಾಗೂ ಸಮಾಜ ನಿಮ್ಮಂದಿಗೆ ಇದೆ' ಎಂದರು.<br /> ಶಿಕ್ಷಣ ಇಲಾಖೆಯ ಅಧಿಕಾರಿ ಜಿ.ಕೆ.ಸುಳೇಗನಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಶಿಬಿರದಲ್ಲಿ 146 ಮಕ್ಕಳ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಕಣ್ಣಿನ ದೋಷ ಹೊಂದಿರುವ 7 ಮಕ್ಕಳು, ಶ್ರವಣ ದೋಷ ಹೊಂದಿರುವ 12 ಮಕ್ಕಳು, ವಿವಿಧ ದೈಹಿಕ ನ್ಯೂನತೆ ಹೊಂದಿರುವ 29 ಮಕ್ಕಳು ಸೇರಿದಂತೆ ಒಟ್ಟು 76 ಮಕ್ಕಳು ಸಾಧನ ಸಲಕರಣೆಗಳನ್ನು ಪಡೆಯಲು ಆಯ್ಕೆಯಾದರು.<br /> <br /> ಹುಬ್ಬಳ್ಳಿಯ ಮನೋವಿಕಾಸ ಸಂಸ್ಥೆಯ ತಜ್ಞರಾದ ವಿಜಯ ಹಿರೇಮಠ, ಡಾ.ಮನೀಶ್, ಡಾ.ಕುಮಾರಿ ಪ್ರಿಯಾಂಕಾ ಹಾಗೂ ಡಾ.ಶಿವಾ ಮಾಮರಡಿ ಮಕ್ಕಳ ತಪಾಸಣೆ ಕೈಗೊಂಡರು. ಜಿ.ಪಂ ಸದಸ್ಯ ಕೃಷ್ಣಪ್ಪ ಸುಣಗಾರ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಶಿಕ್ಷಣಾಧಿಕಾರಿ ವಿ.ಎಂ.ಮಾಳಗಿಮನಿ, ಎಚ್.ಎಂ ಪಡ್ನೇಶಿ, ಡಿ.ಎಚ್. ನರಸಣ್ಣವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರ: </strong>`ವಿಶೇಷ ಅಗತ್ಯತೆಯ ಅವಶ್ಯಕತೆ ಇರುವ ಪ್ರತಿಯೊಂದು ಮಗುವೂ ವಿಶೇಷ ಸಾಮರ್ಥ್ಯವನ್ನೂ ಹೊಂದಿರುತ್ತದೆ. ಅದನ್ನು ಗುರುತಿಸಿ ಪ್ರೇರಣೆ ನೀಡುವ ಕಾರ್ಯ ಸಮಾಜದಿಂದ ಆಗಬೇಕಾಗಿದೆ' ಎಂದು ತಾ.ಪಂ ಅಧ್ಯಕ್ಷ ರುದ್ರಗೌಡ ಪಾಟೀಲ ತಿಳಿಸಿದರು.<br /> <br /> ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ದೈಹಿಕ ನ್ಯೂನತೆ ಹೊಂದಿರುವ ಮಕ್ಕಳ ಪಾಲಕರು ಆತಂಕ ಪಡಬೇಕಾಗಿಲ್ಲ. ಸರ್ಕಾರ ಹಾಗೂ ಸಮಾಜ ನಿಮ್ಮಂದಿಗೆ ಇದೆ' ಎಂದರು.<br /> ಶಿಕ್ಷಣ ಇಲಾಖೆಯ ಅಧಿಕಾರಿ ಜಿ.ಕೆ.ಸುಳೇಗನಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಶಿಬಿರದಲ್ಲಿ 146 ಮಕ್ಕಳ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಕಣ್ಣಿನ ದೋಷ ಹೊಂದಿರುವ 7 ಮಕ್ಕಳು, ಶ್ರವಣ ದೋಷ ಹೊಂದಿರುವ 12 ಮಕ್ಕಳು, ವಿವಿಧ ದೈಹಿಕ ನ್ಯೂನತೆ ಹೊಂದಿರುವ 29 ಮಕ್ಕಳು ಸೇರಿದಂತೆ ಒಟ್ಟು 76 ಮಕ್ಕಳು ಸಾಧನ ಸಲಕರಣೆಗಳನ್ನು ಪಡೆಯಲು ಆಯ್ಕೆಯಾದರು.<br /> <br /> ಹುಬ್ಬಳ್ಳಿಯ ಮನೋವಿಕಾಸ ಸಂಸ್ಥೆಯ ತಜ್ಞರಾದ ವಿಜಯ ಹಿರೇಮಠ, ಡಾ.ಮನೀಶ್, ಡಾ.ಕುಮಾರಿ ಪ್ರಿಯಾಂಕಾ ಹಾಗೂ ಡಾ.ಶಿವಾ ಮಾಮರಡಿ ಮಕ್ಕಳ ತಪಾಸಣೆ ಕೈಗೊಂಡರು. ಜಿ.ಪಂ ಸದಸ್ಯ ಕೃಷ್ಣಪ್ಪ ಸುಣಗಾರ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಶಿಕ್ಷಣಾಧಿಕಾರಿ ವಿ.ಎಂ.ಮಾಳಗಿಮನಿ, ಎಚ್.ಎಂ ಪಡ್ನೇಶಿ, ಡಿ.ಎಚ್. ನರಸಣ್ಣವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>