<p><strong>ಹಾವೇರಿ</strong>: ಶಾಲೆಯ ಸ್ವಚ್ಛತೆಗೆ ಮಕ್ಕ ಳನ್ನು ಬಳಕೆ ಮಾಡಿಕೊಂಡ ತಾಲ್ಲೂಕಿನ ನಾಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಎಚ್.ಎನ್.ಪಾಟೀಲ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶುಕ್ರವಾರ ಸೇವೆಯಿಂದ ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ.<br /> <br /> ಶಾಲಾ ಪ್ರಾರಂಭೋತ್ಸವದ ಹಿನ್ನೆಲೆ ಯಲ್ಲಿ ಶಾಲಾ ಸ್ವಚ್ಛತೆಗೆ ಕೂಲಿಗಳನ್ನು ಬಳಸದೇ ಶಾಲಾ ಮಕ್ಕಳಿಂದಲೇ ಶಾಲೆಯ ಕಸ ಗೂಡಿಸುವುದು, ಅದನ್ನು ಬೇರೆಡೆಗೆ ಸಾಗಿಸುವುದು ಅಲ್ಲದೇ ರಜೆಯ ಅವಧಿಯಲ್ಲಿ ಒಡೆದು ಶಾಲೆಯ ಮೇಲ್ಛಾವಣಿ ಹೆಂಚುಗಳನ್ನು ಬದಲಾವಣೆ ಮಾಡಿಸಲಾಗಿದೆ ಎಂಬ ವಿಷಯವನ್ನು ಮೇ 31 ರಂದು `ಪ್ರಜಾವಾಣಿ' ಪತ್ರಿಕೆ `ಶಾಲೆಗೆ ಬರುವ ಮುನ್ನವೇ ಸ್ವಚ್ಛತೆ ಶಿಕ್ಷೆ' ಎಂಬ ಶೀರ್ಷಿಕೆ ಯಡಿ ಚಿತ್ರ ಸಹಿತ ವರದಿ ಪ್ರಕಟಿಸಿತ್ತು.<br /> <br /> ಮಕ್ಕಳನ್ನು ಶಾಲಾ ಸ್ವಚ್ಛತಾ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಮುಖ್ಯ ಶಿಕ್ಷಕರು ಕರ್ತವ್ಯಲೋಪ ಎಸಗಿರುವುದು ಹಾಗೂ ಸರ್ಕಾರಿ ನೌಕರಿಗೆ ಭೂಷಣ ವಲ್ಲದ ರೀತಿತಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.<br /> <br /> ಸರ್ಕಾರಿ ನೌಕರರಾದ ಮುಖ್ಯ ಶಿಕ್ಷಕರು, 2009 ರ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಮತ್ತುಯ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯ ಮಗಳು 1966 ರ ನಿಯಮ 3(1) (2) (3) ರ ಉಲ್ಲಂಘನೆ ಮಾಡಿರು ವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ಅನ್ವಯ ಸೇವೆಯಿಂದ ಅಮಾನತು ಗೊಳಿಸ ಲಾಗಿದೆಯಲ್ಲದೇ, ಈ ಕುರಿತು ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.<br /> <br /> ಅಮಾನತುಗೊಂಡ ಶಿಕ್ಷಕರು ಇಲಾಖೆಯ ಪೂರ್ವನುಮತಿ ಪಡೆ ಯದೇ ಕೇಂದ್ರ ಸ್ಥಾನ ಬಿಟ್ಟು ತೆರಳು ವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಶಾಲೆಯ ಸ್ವಚ್ಛತೆಗೆ ಮಕ್ಕ ಳನ್ನು ಬಳಕೆ ಮಾಡಿಕೊಂಡ ತಾಲ್ಲೂಕಿನ ನಾಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಎಚ್.ಎನ್.ಪಾಟೀಲ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶುಕ್ರವಾರ ಸೇವೆಯಿಂದ ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ.<br /> <br /> ಶಾಲಾ ಪ್ರಾರಂಭೋತ್ಸವದ ಹಿನ್ನೆಲೆ ಯಲ್ಲಿ ಶಾಲಾ ಸ್ವಚ್ಛತೆಗೆ ಕೂಲಿಗಳನ್ನು ಬಳಸದೇ ಶಾಲಾ ಮಕ್ಕಳಿಂದಲೇ ಶಾಲೆಯ ಕಸ ಗೂಡಿಸುವುದು, ಅದನ್ನು ಬೇರೆಡೆಗೆ ಸಾಗಿಸುವುದು ಅಲ್ಲದೇ ರಜೆಯ ಅವಧಿಯಲ್ಲಿ ಒಡೆದು ಶಾಲೆಯ ಮೇಲ್ಛಾವಣಿ ಹೆಂಚುಗಳನ್ನು ಬದಲಾವಣೆ ಮಾಡಿಸಲಾಗಿದೆ ಎಂಬ ವಿಷಯವನ್ನು ಮೇ 31 ರಂದು `ಪ್ರಜಾವಾಣಿ' ಪತ್ರಿಕೆ `ಶಾಲೆಗೆ ಬರುವ ಮುನ್ನವೇ ಸ್ವಚ್ಛತೆ ಶಿಕ್ಷೆ' ಎಂಬ ಶೀರ್ಷಿಕೆ ಯಡಿ ಚಿತ್ರ ಸಹಿತ ವರದಿ ಪ್ರಕಟಿಸಿತ್ತು.<br /> <br /> ಮಕ್ಕಳನ್ನು ಶಾಲಾ ಸ್ವಚ್ಛತಾ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಮುಖ್ಯ ಶಿಕ್ಷಕರು ಕರ್ತವ್ಯಲೋಪ ಎಸಗಿರುವುದು ಹಾಗೂ ಸರ್ಕಾರಿ ನೌಕರಿಗೆ ಭೂಷಣ ವಲ್ಲದ ರೀತಿತಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.<br /> <br /> ಸರ್ಕಾರಿ ನೌಕರರಾದ ಮುಖ್ಯ ಶಿಕ್ಷಕರು, 2009 ರ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಮತ್ತುಯ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯ ಮಗಳು 1966 ರ ನಿಯಮ 3(1) (2) (3) ರ ಉಲ್ಲಂಘನೆ ಮಾಡಿರು ವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ಅನ್ವಯ ಸೇವೆಯಿಂದ ಅಮಾನತು ಗೊಳಿಸ ಲಾಗಿದೆಯಲ್ಲದೇ, ಈ ಕುರಿತು ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.<br /> <br /> ಅಮಾನತುಗೊಂಡ ಶಿಕ್ಷಕರು ಇಲಾಖೆಯ ಪೂರ್ವನುಮತಿ ಪಡೆ ಯದೇ ಕೇಂದ್ರ ಸ್ಥಾನ ಬಿಟ್ಟು ತೆರಳು ವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>