<p><strong>ಹಿರೇಕೆರೂರ: </strong>ನ್ಯಾಯ, ನೀತಿ, ಧರ್ಮ ಹಾಗೂ ಮಾನವೀಯತೆಯ ತಳಹದಿಯ ಮೇಲೆ ಬಡ ಜನತೆಯನ್ನು ಸಂಘಟಿಸಿ ಸಮಾಜ ಪರಿವರ್ತನೆ ಮಾಡುವ ಕಾರ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಶ್ಲಾಘನೀಯ ಕಾರ್ಯ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ ಹೇಳಿದರು.<br /> <br /> ತಾಲ್ಲೂಕಿನ ಹಂಸಭಾವಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೃಷಿ, ತೋಟಗಾರಿಕೆ, ಪಶು ಸಂಗೋಪನಾ ಇಲಾಖೆ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಕೃಷಿ ಉತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಹಳ್ಳಿ ಮಾತನಾಡಿ, ಇಂದಿನ ಯುವಕರು ಕೃಷಿಯ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ, ಅಲ್ಲದೇ ಕೃಷಿ ಉದ್ಯೋಗ ಇಂದಿನ ಕಾಲಮಾನದಲ್ಲಿ ಅತ್ಯಂತ ವಿರಳವಾದ ಅಂಶವಾಗಿದೆ. ಕೃಷಿಯಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆಯಿಂದ ಸಾಕಷ್ಟು ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದರು.<br /> <br /> ನಿವೃತ್ತ ಡಿವೈಎಸ್ಪಿ ಎನ್.ಎಂ.ಈಟೇರ ಮಾತನಾಡಿ, ಇಂದಿನ ಯುವಕರು ಹಳ್ಳಿಯಲ್ಲಿರುವ ತಮ್ಮ ಫಲವತ್ತಾದ ಕೃಷಿ ಭೂಮಿ ಬಿಟ್ಟು ಪಟ್ಟಣಕ್ಕೆ ವಲಸೆ ಹೊಗುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ಆಹಾರಕ್ಕಾಗಿ ಪರಿತಪಿಸುವ ಕಾಲ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಷಣ್ಮುಖಯ್ಯ ಮಳಿಮಠ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಕೃಷ್ಣಪ್ಪ ಕುಲಾಲ್, ಮೋಹನಗೌಡ ಪಾಟೀಲ, ರಾಜು ಹುಚಗೊಂಡರ ಇತರರು ಉಪಸ್ಥಿತರಿದ್ದರು.<br /> ಮೇಲ್ವಿಚಾರಕ ಅಣ್ಣಪ್ಪ ಆರ್. ನಿರೂಪಿಸಿದರು. ರಮೇಶ್ ಎಂ.ಎನ್. ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಪಿ.ಜಿ. ವಂದಿಸಿದರು. </p>.<p><strong>ಉಸಿರು ಕಟ್ಟಿ ಕುರಿಗಳ ಸಾವು</strong><br /> ಹಿರೇಕೆರೂರ:ತಾಲ್ಲೂಕಿನ ಯಲವ ದಹಳ್ಳಿ ಮತ್ತು ಆಲದಗೇರಿ ಗ್ರಾಮಗಳ ಮಧ್ಯೆ ವಲಸೆ ಕುರಿಗಾರರಿಗೆ ಸೇರಿದ 24 ಕುರಿ ಮತ್ತು 3 ಮೇಕೆಗಳು ಗುಂಡಿಗೆ ಬಿದ್ದು ಉಸಿರು ಕಟ್ಟಿ ಸಾವನ್ನಪ್ಪಿವೆ.<br /> <br /> ‘ಭಾನುವಾರ ರಾತ್ರಿ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಉಸಿರು ಕಟ್ಟಿ ಸಾವನ್ನಪ್ಪಿವೆ’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಸಹಾಯಕ ನಿರ್ದೇಶಕ ಡಾ.ಗೋಪಿನಾಥ ತಿಳಿಸಿದ್ದಾರೆ. ಶಾಸಕ ಯು.ಬಿ.ಬಣಕಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ: </strong>ನ್ಯಾಯ, ನೀತಿ, ಧರ್ಮ ಹಾಗೂ ಮಾನವೀಯತೆಯ ತಳಹದಿಯ ಮೇಲೆ ಬಡ ಜನತೆಯನ್ನು ಸಂಘಟಿಸಿ ಸಮಾಜ ಪರಿವರ್ತನೆ ಮಾಡುವ ಕಾರ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಶ್ಲಾಘನೀಯ ಕಾರ್ಯ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ ಹೇಳಿದರು.<br /> <br /> ತಾಲ್ಲೂಕಿನ ಹಂಸಭಾವಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೃಷಿ, ತೋಟಗಾರಿಕೆ, ಪಶು ಸಂಗೋಪನಾ ಇಲಾಖೆ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಕೃಷಿ ಉತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಹಳ್ಳಿ ಮಾತನಾಡಿ, ಇಂದಿನ ಯುವಕರು ಕೃಷಿಯ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ, ಅಲ್ಲದೇ ಕೃಷಿ ಉದ್ಯೋಗ ಇಂದಿನ ಕಾಲಮಾನದಲ್ಲಿ ಅತ್ಯಂತ ವಿರಳವಾದ ಅಂಶವಾಗಿದೆ. ಕೃಷಿಯಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆಯಿಂದ ಸಾಕಷ್ಟು ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದರು.<br /> <br /> ನಿವೃತ್ತ ಡಿವೈಎಸ್ಪಿ ಎನ್.ಎಂ.ಈಟೇರ ಮಾತನಾಡಿ, ಇಂದಿನ ಯುವಕರು ಹಳ್ಳಿಯಲ್ಲಿರುವ ತಮ್ಮ ಫಲವತ್ತಾದ ಕೃಷಿ ಭೂಮಿ ಬಿಟ್ಟು ಪಟ್ಟಣಕ್ಕೆ ವಲಸೆ ಹೊಗುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ಆಹಾರಕ್ಕಾಗಿ ಪರಿತಪಿಸುವ ಕಾಲ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಷಣ್ಮುಖಯ್ಯ ಮಳಿಮಠ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಕೃಷ್ಣಪ್ಪ ಕುಲಾಲ್, ಮೋಹನಗೌಡ ಪಾಟೀಲ, ರಾಜು ಹುಚಗೊಂಡರ ಇತರರು ಉಪಸ್ಥಿತರಿದ್ದರು.<br /> ಮೇಲ್ವಿಚಾರಕ ಅಣ್ಣಪ್ಪ ಆರ್. ನಿರೂಪಿಸಿದರು. ರಮೇಶ್ ಎಂ.ಎನ್. ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಪಿ.ಜಿ. ವಂದಿಸಿದರು. </p>.<p><strong>ಉಸಿರು ಕಟ್ಟಿ ಕುರಿಗಳ ಸಾವು</strong><br /> ಹಿರೇಕೆರೂರ:ತಾಲ್ಲೂಕಿನ ಯಲವ ದಹಳ್ಳಿ ಮತ್ತು ಆಲದಗೇರಿ ಗ್ರಾಮಗಳ ಮಧ್ಯೆ ವಲಸೆ ಕುರಿಗಾರರಿಗೆ ಸೇರಿದ 24 ಕುರಿ ಮತ್ತು 3 ಮೇಕೆಗಳು ಗುಂಡಿಗೆ ಬಿದ್ದು ಉಸಿರು ಕಟ್ಟಿ ಸಾವನ್ನಪ್ಪಿವೆ.<br /> <br /> ‘ಭಾನುವಾರ ರಾತ್ರಿ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಉಸಿರು ಕಟ್ಟಿ ಸಾವನ್ನಪ್ಪಿವೆ’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಸಹಾಯಕ ನಿರ್ದೇಶಕ ಡಾ.ಗೋಪಿನಾಥ ತಿಳಿಸಿದ್ದಾರೆ. ಶಾಸಕ ಯು.ಬಿ.ಬಣಕಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>