<p><strong>ಬೆಂಗಳೂರು</strong>: ಅಪರಾಧ ಪ್ರಕರಣಗಳ ತನಿಖೆಯ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಇಂತಿಷ್ಟೇ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕೆಂಬ ಗಡುವು ನಿಗದಿಪಡಿಸಿದೆ.</p>.<p>ಸಣ್ಣ ಪುಟ್ಟ ಅಪರಾಧಗಳು ಮತ್ತು ಗಂಭೀರ ಅಪರಾಧಗಳ ತನಿಖೆ ಪೂರ್ಣಗೊಳಿಸಲು ಕ್ರಮವಾಗಿ 60 ಮತ್ತು 90 ದಿನಗಳ ಕಾಲಾವಕಾಶ ನಿಗದಿಪಡಿಸಿದೆ.</p>.<p>ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯಕುಮಾರ್ ಪಾಟೀಲ್ ವಿರುದ್ಧ 2012ರಲ್ಲಿ ಸಲ್ಲಿಸಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ದೂರುದಾರ ಸುಜಿತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ತ್ವರಿತ ತನಿಖೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಿ ಪೊಲೀಸರಿಗೆ ಹಲವು ನಿರ್ದೇಶನ<br />ಗಳನ್ನು ನೀಡಿದೆ.</p>.<p>ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಗೆ ಸೂಕ್ತ ಕಾರಣ ಪಡೆದು ವಿಚಾರಣಾ ಕೋರ್ಟ್ಗಳು ಪೊಲೀಸರ ಕೋರಿಕೆಯ ಮೇರೆಗೆ ತನಿಖೆಯ ಅವಧಿಯನ್ನು ವಿಸ್ತರಣೆ ಮಾಡಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಪರಾಧ ಪ್ರಕರಣಗಳ ತನಿಖೆಯ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಇಂತಿಷ್ಟೇ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕೆಂಬ ಗಡುವು ನಿಗದಿಪಡಿಸಿದೆ.</p>.<p>ಸಣ್ಣ ಪುಟ್ಟ ಅಪರಾಧಗಳು ಮತ್ತು ಗಂಭೀರ ಅಪರಾಧಗಳ ತನಿಖೆ ಪೂರ್ಣಗೊಳಿಸಲು ಕ್ರಮವಾಗಿ 60 ಮತ್ತು 90 ದಿನಗಳ ಕಾಲಾವಕಾಶ ನಿಗದಿಪಡಿಸಿದೆ.</p>.<p>ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯಕುಮಾರ್ ಪಾಟೀಲ್ ವಿರುದ್ಧ 2012ರಲ್ಲಿ ಸಲ್ಲಿಸಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ದೂರುದಾರ ಸುಜಿತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ತ್ವರಿತ ತನಿಖೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಿ ಪೊಲೀಸರಿಗೆ ಹಲವು ನಿರ್ದೇಶನ<br />ಗಳನ್ನು ನೀಡಿದೆ.</p>.<p>ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಗೆ ಸೂಕ್ತ ಕಾರಣ ಪಡೆದು ವಿಚಾರಣಾ ಕೋರ್ಟ್ಗಳು ಪೊಲೀಸರ ಕೋರಿಕೆಯ ಮೇರೆಗೆ ತನಿಖೆಯ ಅವಧಿಯನ್ನು ವಿಸ್ತರಣೆ ಮಾಡಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>