‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲು ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಅಡಿಯಲ್ಲಿ ಅವಕಾಶವಿಲ್ಲ. ಏನಿದ್ದರೂ ದೋಷಾರೋಪಣೆ ಪಟ್ಟಿಯನ್ನು ಪೊಲೀಸ್ ಠಾಣಾಧಿಕಾರಿ ಮಾತ್ರವೇ ನ್ಯಾಯಾಲಯಕ್ಕೆ ಸಲ್ಲಿಸಲು ಅವಕಾಶವಿದೆ. ಆದ್ದರಿಂದ ಸಿಟಿ ಸಿವಿಲ್ ಕೋರ್ಟ್ ನ 67ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಜಯನ್ ಅವರು ನಡೆಸುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡಬೇಕು’ಎಂಬ ಅರ್ಜಿದಾರ ಮೊಹಮದ್ ನಲಪಾಡ್ ಪರ ವಕೀಲ ಪಿ.ಉಸ್ಮಾನ್ ಅವರ ಮನವಿಯನ್ನು ನ್ಯಾಯಪೀಠ ಮಾನ್ಯ ಮಾಡಿದೆ.