ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಇಲಾಖೆ ಕಟ್ಟಡ ಏರಿದ ಉಪಾಧ್ಯಕ್ಷ

Last Updated 5 ಡಿಸೆಂಬರ್ 2019, 9:13 IST
ಅಕ್ಷರ ಗಾತ್ರ

ಶಿವಮೊಗ್ಗ: ಮನೆಯ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ನಿರಪೇಕ್ಷಣಾ ಪತ್ರ ನೀಡಬೇಕು ಎಂದು ಆಗ್ರಹಿಸಿ ಹೊಸನಗರ ತಾಲ್ಲೂಕು ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಬುಧವಾರ ಅರಣ್ಯ ಇಲಾಖೆ ನಗರ ವಲಯ ಅರಣ್ಯಾಧಿಕಾರಿ ಕಚೇರಿ ಕಟ್ಟಡ ಏರಿ ಪ್ರತಿಭಟನೆ ನಡೆಸಿದರು.

ಮೂಡುಗೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 220 ಮನೆಗಳಿವೆ. ಹಲವು ದಶಕಗಳಿಂದ ಅಲ್ಲೇ ವಾಸಿಸುತ್ತಿದ್ದಾರೆ. ಅರಣ್ಯ ವ್ಯಾಪ್ತಿಯಲ್ಲಿವೆ ಎಂಬ ಕಾರಣಕ್ಕೆಹಕ್ಕುಪತ್ರ ನೀಡಿಲ್ಲ. ನಿರಪೇಕ್ಷಣಾ ಪತ್ರ ನೀಡುವಂತೆ ಕೋರಿ ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿಲ್ಲ ಎಂದು ದೂರಿದರು.

ನಿರಪೇಕ್ಷಣಾ ಪತ್ರ ನೀಡುವವರೆಗೂ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು.ಕೊನೆಗೆ ಅಧಿಕಾರಿಗಳು ಹರಸಾಹಸ ಮಾಡಿ ಅವರನ್ನು ಕೆಳಗೆ ಇಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT