ಇದ್ದಲ್ಲಿಗೇ ಮದ್ಯ ಸರಬರಾಜು: ಹಳ್ಳಿಗಳಲ್ಲಿ ಕೆಲ ಆಯ್ದ ಮನೆಗಳು, ದಿನಸಿ ಅಂಗಡಿ, ಸಣ್ಣ ಪುಟ್ಟ ಹೋಟೆಲ್ ಮುಂತಾದೆಡೆ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಬಯಲುಸೀಮೆಯಿಂದ ಹೊಟ್ಟೆಪಾಡಿಗಾಗಿ ಮಲೆನಾಡಿನ ಅಡಿಕೆ ತೋಟದ ಬೇಸಾಯಕ್ಕೆ ಬಂದ ಕೂಲಿಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳಕ್ಕೆ ಕಳಪೆ ದರ್ಜೆಯ ಅಕ್ರಮ ಮದ್ಯ ಸರಬರಾಜಾಗುತ್ತಿದೆ. ಹೆಚ್ಚು ಬೆಲೆಗೆ ಮಾರಾಟವಾಗುವ ಅಕ್ರಮ ಮದ್ಯ ಸೇವಿಸುವ ಬಡವರ ಬದುಕು ನರಕವಾಗುತ್ತಿದೆ. ದಲಿತ ಕೇರಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ. ಇದನ್ನು ಹೇಗಾದರೂ ಮಾಡಿ ತಪ್ಪಿಸಬೇಕು. ಬಡ ಕುಟುಂಬಗಳನ್ನು ಉಳಿಸಬೇಕು ಎನ್ನುತ್ತಾರೆ ದಲಿತ ಸಂಘರ್ಷ ಸಮಿತಿ ಸಂಚಾಲಕ ಹಾರೋಗೊಳಿಗೆ ವಿಶ್ವನಾಥ್.