ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಹಿಂದಿನ ವಿಚಾರಣೆಗೆ ಗೌರಮ್ಮ ಅವರು ತೆರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ. ಅಧಿಕಾರಿಗಳು ನೋಟಿಸ್ ಹಿಡಿದು ಬಂದ ಸಂದರ್ಭದಲ್ಲಿ ಗೌರಮ್ಮ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯ ತಮ್ಮ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅಧಿಕಾರಿಗಳು ಅವರ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ.