‘ಭರತನ ನಾಟ್ಯಶಾಸ್ತ್ರವನ್ನು ಸಂಸ್ಕೃತದಿಂದ ಕನ್ನಡಕ್ಕೆ ಭಾಷಾಂತರಿಸಲಾಗಿದ್ದು, ಮುದ್ರಣಕ್ಕೆ ಸಿದ್ಧವಾಗಿದೆ. ಕರ್ನಾಟಕ ರಂಗಮಂದಿರ ಪ್ರಾಧಿಕಾರ ಸ್ಥಾಪಿಸಲು ರೂಪುರೇಷೆಯನ್ನು ಸಿದ್ಧಗೊಳಿಸಿ, ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿದೆ. ತಾವು ಈ ಯೋಜನೆಗೆ ಹಸಿರು ನಿಶಾನೆ ನೀಡಿ, ಪ್ರಾಧಿಕಾರ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.