<p><strong>ಬೆಂಗಳೂರು: </strong>ಯಲಹಂಕ ವಲಯ ವ್ಯಾಪ್ತಿಯ ಜಕ್ಕೂರು ಕೆರೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.</p>.<p>110 ಎಕರೆ ವ್ಯಾಪ್ತಿಯ ಜಕ್ಕೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ’ಅಮೃತ ನಗರೋತ್ಥಾನ ಯೋಜನೆಯಡಿ ₹1.10 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತದೆ. ತುರ್ತು ಕಾಮಗಾರಿಗಳ ಯೋಜನೆ ರೂಪಿಸಿಕೊಂಡು ಕ್ರಮ ಕೈಗೊಳ್ಳಿ‘ ಎಂದು ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ಮೋಹನ್ಕೃಷ್ಣ ಅವರಿಗೆ ಆದೇಶಿಸಿದರು.</p>.<p>ತಜ್ಞರೊಂದಿಗೆ ಸಮಾಲೋಚಿಸಿ ವೆಟ್ಲ್ಯಾಂಡ್, ಶೌಚಾಲಯ ನವೀಕರಣ, ಒಳಹರಿವಿನ ಸುಧಾರಣೆ ಮತ್ತು ಒಳಹರಿವಿನ ಭಾಗಕ್ಕೆ ಫೆನ್ಸಿಂಗ್, ಜಲಪೋಷಣ ಸಂಘದವರ ಕೋರಿಕೆಯಂತೆ ವಾಚ್ ಟವರ್ ಹಾಗೂ ಮಾಹಿತಿ ಕೇಂದ್ರ ಸ್ಥಾಪಿಸಲು ಸೂಚಿಸಿದರು.</p>.<p>ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ವಲಯ ಮುಖ್ಯ ಎಂಜಿನಿಯರ್ ರಂಗನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯಲಹಂಕ ವಲಯ ವ್ಯಾಪ್ತಿಯ ಜಕ್ಕೂರು ಕೆರೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.</p>.<p>110 ಎಕರೆ ವ್ಯಾಪ್ತಿಯ ಜಕ್ಕೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ’ಅಮೃತ ನಗರೋತ್ಥಾನ ಯೋಜನೆಯಡಿ ₹1.10 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತದೆ. ತುರ್ತು ಕಾಮಗಾರಿಗಳ ಯೋಜನೆ ರೂಪಿಸಿಕೊಂಡು ಕ್ರಮ ಕೈಗೊಳ್ಳಿ‘ ಎಂದು ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ಮೋಹನ್ಕೃಷ್ಣ ಅವರಿಗೆ ಆದೇಶಿಸಿದರು.</p>.<p>ತಜ್ಞರೊಂದಿಗೆ ಸಮಾಲೋಚಿಸಿ ವೆಟ್ಲ್ಯಾಂಡ್, ಶೌಚಾಲಯ ನವೀಕರಣ, ಒಳಹರಿವಿನ ಸುಧಾರಣೆ ಮತ್ತು ಒಳಹರಿವಿನ ಭಾಗಕ್ಕೆ ಫೆನ್ಸಿಂಗ್, ಜಲಪೋಷಣ ಸಂಘದವರ ಕೋರಿಕೆಯಂತೆ ವಾಚ್ ಟವರ್ ಹಾಗೂ ಮಾಹಿತಿ ಕೇಂದ್ರ ಸ್ಥಾಪಿಸಲು ಸೂಚಿಸಿದರು.</p>.<p>ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ವಲಯ ಮುಖ್ಯ ಎಂಜಿನಿಯರ್ ರಂಗನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>