<p><strong>ಸಾಗರ: </strong>ಮೂರು ವರ್ಷಗಳಿಗೊಮ್ಮೆ ನಡೆಯುವ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರೆ ಫೆ.18ರಿಂದ 9 ದಿನಗಳ ಕಾಲ ನಡೆಯಲಿದ್ದು, ನಗರದ ಪ್ರಮುಖ ರಸ್ತೆಗಳಿಗೆ ಡಾಂಬರೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದ್ದಾರೆ.</p>.<p>ಇಲ್ಲಿನ ನಗರಸಭೆ ಕಚೇರಿ ಹಿಂಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕೋಪಯೋಗಿ ಇಲಾಖೆ ಕಚೇರಿ ಇರುವ ರಸ್ತೆಯನ್ನು ₹ 20 ಲಕ್ಷ ವಿನಿಯೋಗಿಸಿ ಅಭಿವೃದ್ಧಿಗೊಳಿಸಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗ ನಿರ್ಮಿಸಲಾಗುವುದು’ ಎಂದರು.</p>.<p>ಕಳೆದ ಮಳೆಗಾಲದಲ್ಲಿ ನಗರ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಮುಖ್ಯಮಂತ್ರಿ ₹ 6.80 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಇದರ ನೆರವಿನಿಂದ 41 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಬಹುತೇಕವು ಮುಕ್ತಾಯದ ಹಂತದಲ್ಲಿವೆ ಎಂದು ತಿಳಿಸಿದರು.</p>.<p>ಗಣಪತಿ ಕೆರೆ ಮೇಲ್ಭಾಗದ ಬಿ.ಎಚ್. ರಸ್ತೆ ಪಕ್ಕದಲ್ಲಿ ₹ 50 ಲಕ್ಷ ವೆಚ್ಚದಲ್ಲಿ 150 ಅಡಿ ಎತ್ತರದ ಬೃಹತ್ ಧ್ವಜಸ್ತಂಭ ನಿರ್ಮಿಸಲಾಗುತ್ತಿದೆ. ವರ್ಷದ 365 ದಿನವೂ ಇಲ್ಲಿ ರಾಷ್ಟ್ರಧ್ವಜ ಹಾರುವ ವ್ಯವಸ್ಥೆ ಮಾಡಲಾಗುವುದು. ಇದರ ಸುತ್ತಲೂ ಉದ್ಯಾನ, ಮಕ್ಕಳ ಆಟಿಕೆ ಸೌಲಭ್ಯಕ್ಕೆ ₹ 40 ಲಕ್ಷ ವಿನಿಯೋಗಿಸಲಾಗುವುದು ಎಂದರು.</p>.<p>ನಗರಸಭೆ ಸದಸ್ಯರಾದ ಟಿ.ಡಿ.ಮೇಘರಾಜ್, ಡಿ.ತುಕಾರಾಂ, ಅಭಿಯಂತರ ಎಚ್.ಕೆ.ನಾಗಪ್ಪ, ವಿ.ಟಿ.ರವೀಂದ್ರ, ವಿನಾಯಕ ರಾವ್, ಗಿರೀಶ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಮೂರು ವರ್ಷಗಳಿಗೊಮ್ಮೆ ನಡೆಯುವ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರೆ ಫೆ.18ರಿಂದ 9 ದಿನಗಳ ಕಾಲ ನಡೆಯಲಿದ್ದು, ನಗರದ ಪ್ರಮುಖ ರಸ್ತೆಗಳಿಗೆ ಡಾಂಬರೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದ್ದಾರೆ.</p>.<p>ಇಲ್ಲಿನ ನಗರಸಭೆ ಕಚೇರಿ ಹಿಂಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕೋಪಯೋಗಿ ಇಲಾಖೆ ಕಚೇರಿ ಇರುವ ರಸ್ತೆಯನ್ನು ₹ 20 ಲಕ್ಷ ವಿನಿಯೋಗಿಸಿ ಅಭಿವೃದ್ಧಿಗೊಳಿಸಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗ ನಿರ್ಮಿಸಲಾಗುವುದು’ ಎಂದರು.</p>.<p>ಕಳೆದ ಮಳೆಗಾಲದಲ್ಲಿ ನಗರ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಮುಖ್ಯಮಂತ್ರಿ ₹ 6.80 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಇದರ ನೆರವಿನಿಂದ 41 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಬಹುತೇಕವು ಮುಕ್ತಾಯದ ಹಂತದಲ್ಲಿವೆ ಎಂದು ತಿಳಿಸಿದರು.</p>.<p>ಗಣಪತಿ ಕೆರೆ ಮೇಲ್ಭಾಗದ ಬಿ.ಎಚ್. ರಸ್ತೆ ಪಕ್ಕದಲ್ಲಿ ₹ 50 ಲಕ್ಷ ವೆಚ್ಚದಲ್ಲಿ 150 ಅಡಿ ಎತ್ತರದ ಬೃಹತ್ ಧ್ವಜಸ್ತಂಭ ನಿರ್ಮಿಸಲಾಗುತ್ತಿದೆ. ವರ್ಷದ 365 ದಿನವೂ ಇಲ್ಲಿ ರಾಷ್ಟ್ರಧ್ವಜ ಹಾರುವ ವ್ಯವಸ್ಥೆ ಮಾಡಲಾಗುವುದು. ಇದರ ಸುತ್ತಲೂ ಉದ್ಯಾನ, ಮಕ್ಕಳ ಆಟಿಕೆ ಸೌಲಭ್ಯಕ್ಕೆ ₹ 40 ಲಕ್ಷ ವಿನಿಯೋಗಿಸಲಾಗುವುದು ಎಂದರು.</p>.<p>ನಗರಸಭೆ ಸದಸ್ಯರಾದ ಟಿ.ಡಿ.ಮೇಘರಾಜ್, ಡಿ.ತುಕಾರಾಂ, ಅಭಿಯಂತರ ಎಚ್.ಕೆ.ನಾಗಪ್ಪ, ವಿ.ಟಿ.ರವೀಂದ್ರ, ವಿನಾಯಕ ರಾವ್, ಗಿರೀಶ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>