ಸಾಗರ:ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸೋಮವಾರ ಬಹಿರಂಗ ಸಭೆಯಲ್ಲೇ ನಿತ್ರಾಣಗೊಂಡು, ಕುಸಿತು ಬಿದ್ದರು.
ಹೊಸನಗರ ತಾಲ್ಲೂಕಿನ ನಗರ ಹೋಬಳಿ ನಾಗರಿಕ ವೇದಿಕೆ ಪ್ರತಿಭಟನಾ ಸಭೆಯಲ್ಲಿ ಅವರುಪಾಲ್ಗೊಂಡಿದ್ದರು. ಕುಸಿದು ಬಿದ್ದಾಗ ಪ್ರಜ್ಞೆ ತಪ್ಪಿದ್ದ ಅವರನ್ನು ತಕ್ಷಣ ನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸದ್ಯ ಚಿಕಿತ್ಸೆ ನಡೆಯುತ್ತಿದೆ.ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದರಿಂದ ಸುಸ್ತಾಗಿ ಕುಸಿದು ಬಿದ್ದಿದ್ದರು.ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಪ್ರಜ್ಞೆ ಬಂದಿದೆಎಂದು ವೈದ್ಯರು ತಿಳಿಸಿದರು.