<p><strong>ಚಿತ್ತಾಪುರ:</strong> ಒಂದೇ ಗ್ರಾಮದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಸಿಡಿಲು ಅವಘಡದಲ್ಲಿ ಒಬ್ಬ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.</p>.<p>ದಿಗ್ಗಾಂವ ಗ್ರಾಮದ ನಿವಾಸಿ ಭೀಮಾಶಂಕರ ಸಾಬಣ್ಣ ನೀಲಹಳ್ಳಿ ಸಿಡಿಲಿ ಬಡಿದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಜಿಮ್ಸ್ಗೆ ಕರೆದೊಯ್ದಾಗ, ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಇದೇ ಗ್ರಾಮದಲ್ಲಿ ಸಿಡಿಲು ತಾಗಿ ರಾಘವೇಂದ್ರ ಲಾಲಯ್ಯ, ತಯಾಬ್ ಖುರ್ಷಿದಮಿಯ್ಯಾ, ಬನ್ನು ಗುರುಬಸಪ್ಪ, ಚಿತ್ತಾಪುರ ಪಟ್ಟಣದ ವಿಜಯ ಪ್ರಕಾಶ, ಆನಂದ ಕೃಷ್ಣಯ್ಯ ಮತ್ತು ಮಾರುತಿ ಸಾಬಣ್ಣ ಅವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಂದಾಯ ಇಲಾಖೆ ಅಧಿಕಾರಿ, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ಒಂದೇ ಗ್ರಾಮದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಸಿಡಿಲು ಅವಘಡದಲ್ಲಿ ಒಬ್ಬ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.</p>.<p>ದಿಗ್ಗಾಂವ ಗ್ರಾಮದ ನಿವಾಸಿ ಭೀಮಾಶಂಕರ ಸಾಬಣ್ಣ ನೀಲಹಳ್ಳಿ ಸಿಡಿಲಿ ಬಡಿದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಜಿಮ್ಸ್ಗೆ ಕರೆದೊಯ್ದಾಗ, ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಇದೇ ಗ್ರಾಮದಲ್ಲಿ ಸಿಡಿಲು ತಾಗಿ ರಾಘವೇಂದ್ರ ಲಾಲಯ್ಯ, ತಯಾಬ್ ಖುರ್ಷಿದಮಿಯ್ಯಾ, ಬನ್ನು ಗುರುಬಸಪ್ಪ, ಚಿತ್ತಾಪುರ ಪಟ್ಟಣದ ವಿಜಯ ಪ್ರಕಾಶ, ಆನಂದ ಕೃಷ್ಣಯ್ಯ ಮತ್ತು ಮಾರುತಿ ಸಾಬಣ್ಣ ಅವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಂದಾಯ ಇಲಾಖೆ ಅಧಿಕಾರಿ, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>