<p>ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಕಲ್ಲೂರು–ಕೆ ಬಳಿ ಈಚೆಗೆ ನಡೆದ ಹಣಮಂತ ಕೂಡಲಗಿ (46) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಯೂರ ಗ್ರಾಮದ ಸಹೋದರರಾದ ಗೋಪಾಲ ಕಟ್ಟಿಮನಿ, ಮಹಾಂತಪ್ಪ ಕಟ್ಟಿಮನಿ, ವಿಜಯಪುರ ಜಿಲ್ಲೆ ಆಲಮೇಲದ ಸುನೀಲ, ಅನಿಲ ಬಾಜಿರಾಯ ಬಾವಿಕಟ್ಟಿ, ಉಮೇಶ ಭಾವಿಕಟ್ಟಿ, ರಾಜು ಕಾಂಬಳೆ, ಸುನೀಲ ರೇವಣಿಸಿದ್ದಪ್ಪ, ಶಿವಶರಣಪ್ಪ, ಶ್ರೀಮಂತ, ದೇವೇಂದ್ರ ಸಿದ್ರಾಮಪ್ಪ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರೋಪಿತರು ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ, ವಿಶೇಷ ತಂಡ ರಚಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>‘ಮಯೂರ ಗ್ರಾಮದ ಭಾವಿಕಟ್ಟಿ ಕುಟುಂಬ ಹಾಗೂ ಕೂಡಲಗಿ ಗ್ರಾಮದ ಹೊಸಮನಿ ಕುಟುಂಬದವರ ನಡುವಿನ ಹಳೆಯ ವೈಷಮ್ಯದ ಕಾರಣ ಈ ಕೊಲೆ ನಡೆದಿದೆ. ಎರಡು ವರ್ಷಗಳ ಹಿಂದೆ ಕಲಬುರ್ಗಿ ಹೊರವಲಯದಲ್ಲಿ ಶಿವಲಿಂಗಪ್ಪ ಎನ್ನುವವರ ಕೊಲೆ ನಡೆದಿತ್ತು. ಅದರ ಪ್ರತಿಕಾರವಾಗಿ ಈ ಕೊಲೆ ನಡೆದಿರುವುದು ಮೇಲ್ಮೋಟಕ್ಕೆ ಕಂಡುಬಂದಿದೆ’ ಎಂದೂ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅವರ ಸಹೋದರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಎಲ್ಲ ಹೆಸರುಗಳನ್ನು ಶರಣಬಸಪ್ಪ<br />ಕೂಡಲಗಿ ನೀಡಿರುವ ದೂರಿನಂತೆ ನೆಲೋಗಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ಜೇವರ್ಗಿ ತಾಲ್ಲೂಕಿನ ಕಲ್ಲೂರು–ಕೆ ಬಳಿ ಈಚೆಗೆ ನಡೆದ ಹಣಮಂತ ಕೂಡಲಗಿ (46) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಯೂರ ಗ್ರಾಮದ ಸಹೋದರರಾದ ಗೋಪಾಲ ಕಟ್ಟಿಮನಿ, ಮಹಾಂತಪ್ಪ ಕಟ್ಟಿಮನಿ, ವಿಜಯಪುರ ಜಿಲ್ಲೆ ಆಲಮೇಲದ ಸುನೀಲ, ಅನಿಲ ಬಾಜಿರಾಯ ಬಾವಿಕಟ್ಟಿ, ಉಮೇಶ ಭಾವಿಕಟ್ಟಿ, ರಾಜು ಕಾಂಬಳೆ, ಸುನೀಲ ರೇವಣಿಸಿದ್ದಪ್ಪ, ಶಿವಶರಣಪ್ಪ, ಶ್ರೀಮಂತ, ದೇವೇಂದ್ರ ಸಿದ್ರಾಮಪ್ಪ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರೋಪಿತರು ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ, ವಿಶೇಷ ತಂಡ ರಚಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>‘ಮಯೂರ ಗ್ರಾಮದ ಭಾವಿಕಟ್ಟಿ ಕುಟುಂಬ ಹಾಗೂ ಕೂಡಲಗಿ ಗ್ರಾಮದ ಹೊಸಮನಿ ಕುಟುಂಬದವರ ನಡುವಿನ ಹಳೆಯ ವೈಷಮ್ಯದ ಕಾರಣ ಈ ಕೊಲೆ ನಡೆದಿದೆ. ಎರಡು ವರ್ಷಗಳ ಹಿಂದೆ ಕಲಬುರ್ಗಿ ಹೊರವಲಯದಲ್ಲಿ ಶಿವಲಿಂಗಪ್ಪ ಎನ್ನುವವರ ಕೊಲೆ ನಡೆದಿತ್ತು. ಅದರ ಪ್ರತಿಕಾರವಾಗಿ ಈ ಕೊಲೆ ನಡೆದಿರುವುದು ಮೇಲ್ಮೋಟಕ್ಕೆ ಕಂಡುಬಂದಿದೆ’ ಎಂದೂ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅವರ ಸಹೋದರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಎಲ್ಲ ಹೆಸರುಗಳನ್ನು ಶರಣಬಸಪ್ಪ<br />ಕೂಡಲಗಿ ನೀಡಿರುವ ದೂರಿನಂತೆ ನೆಲೋಗಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>