ಕಳೆದ ವರ್ಷವೂ ಇಷ್ಟೇ ಹಣವನ್ನೂ ಹಂಚಿಕೆ ಮಾಡಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಕಲಬುರಗಿಗೆ ರೈಲ್ವೆ ವಿಭಾಗವನ್ನು ಮಂಜೂರು ಮಾಡಿ ₹ 5 ಕೋಟಿ ಮೀಸಲಿಟ್ಟಿದ್ದರು. ವಿಭಾಗೀಯ ಕಚೇರಿಗಳ ನಿರ್ಮಾಣಕ್ಕಾಗಿ 40 ಎಕರೆ ಜಮೀನನ್ನು ಗುರುತಿಸಿದ್ದರು. ಯುಪಿಎ ಬಳಿಕ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ವಿಭಾಗೀಯ ಕೇಂದ್ರದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿತು. ಹಾಗಾಗಿಯೇ, ಉದ್ದೇಶಪೂರ್ವಕವಾಗಿ ಕಡಿಮೆ ಹಣವನ್ನು ಮಂಜೂರು ಮಾಡಲಾಗುತ್ತಿದೆ. ₹ 1 ಸಾವಿರದಲ್ಲಿ ವಿಭಾಗೀಯ ಕೇಂದ್ರ ಆರಂಭಿಸಲು ಸಾಧ್ಯವೇ. ಇದೊಂದು ಅಸಮರ್ಥ ಡಬಲ್ ಎಂಜಿನ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ ರೈಲ್ವೆ ಹೋರಾಟಗಾರ ಸುನೀಲ ಕುಲಕರ್ಣಿ.