<p><strong>ಚಿಂಚೋಳಿ:</strong> ತಾಲ್ಲೂಕಿನಲ್ಲಿ ಮಳೆ ಮುಂದುವದಿದ್ದು ಕೆರೆಕುಂಟೆಗಳು ಹಾಗೂ ಜಲಾಶಯಗಳು ಭರ್ತಿಯಾಗತೊಡಗಿವೆ.</p>.<p>ಅವಿಭಜಿತ ಚಿಂಚೋಳಿ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ 20 ಕೆರೆಗಳಲ್ಲಿ ಈಗಾಗಲೇ 12 ಕೆರೆಗಳು ಭರ್ತಿಯಾಗಿವೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಶರಣಪ್ಪ ಕೇಶ್ವಾರ ತಿಳಿಸಿದ್ದಾರೆ.</p>.<p>ಸಣ್ಣ ನೀರಾವರಿ ಉಪ ವಿಭಾಗ ವ್ಯಾಪ್ತಿಯ ತುಮಕುಂಟಾ, ಹಸರಗುಂಡಗಿ, ಚಿಕ್ಕಲಿಂಗದಳ್ಳಿ, ಕೋಡ್ಲಿ-ಅಲ್ಲಾಪುರ, ಹುಲ್ಸಗೂಡ, ಮುಕರಂಬಾ, ಚಂದನಕೇರಾ, ಖಾನಾಪುರ, ಐನಾಪುರ ಹಳೆಯ ಮತ್ತು ಐನಾಪುರ ಹೊಸ ಮತ್ತು ನಾಗಾಈದಲಾಯಿ, ದೋಟಿಕೊಳ ಕೆರೆಗಳು ಭರ್ತಿಯಾಗಿವೆ ಎಂದರು.</p>.<p>ಹೂಡದಳ್ಳಿ, ಕೊಳ್ಳೂರು, ಚಿಂದಾನೂರ, ಧರ್ಮಾಸಾಗರ ಕೆರೆಗಳು ಭರ್ತಿಯ ಅಂಚಿನಲ್ಲಿದ್ದು, ರಾಜ್ಯದ ಎರಡನೇ ಅತಿದೊಡ್ಡ ಸಣ್ಣ ನೀರಾವರಿಯ ಸಾಲೇಬೀರನಹಳ್ಳಿ ಕೆರೆ ಭರ್ತಿಗೆ ಕೇವಲ 10 ಅಡಿ ಮಾತ್ರ ಬಾಕಿಯಿದೆ. ಒಟ್ಟು 47 ಅಡಿ ಆಳದ ಕೆರೆಗೆ ಈವರೆಗೆ 37 ಅಡಿ ನೀರು ಹರಿದು ಬಂದಿದೆ. ಅಂತಾವರಂ, ಪಂಗರಗಾ ಕೆರೆಗಳಿಗೂ ಒಳ ಹರಿವು ಹೆಚ್ಚಾಗಿದೆ ಎಂದರು.</p>.<p>ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯ 4 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭರ್ತಿಯಾಗತೊಡಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ತಾಲ್ಲೂಕಿನಲ್ಲಿ ಮಳೆ ಮುಂದುವದಿದ್ದು ಕೆರೆಕುಂಟೆಗಳು ಹಾಗೂ ಜಲಾಶಯಗಳು ಭರ್ತಿಯಾಗತೊಡಗಿವೆ.</p>.<p>ಅವಿಭಜಿತ ಚಿಂಚೋಳಿ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ 20 ಕೆರೆಗಳಲ್ಲಿ ಈಗಾಗಲೇ 12 ಕೆರೆಗಳು ಭರ್ತಿಯಾಗಿವೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಶರಣಪ್ಪ ಕೇಶ್ವಾರ ತಿಳಿಸಿದ್ದಾರೆ.</p>.<p>ಸಣ್ಣ ನೀರಾವರಿ ಉಪ ವಿಭಾಗ ವ್ಯಾಪ್ತಿಯ ತುಮಕುಂಟಾ, ಹಸರಗುಂಡಗಿ, ಚಿಕ್ಕಲಿಂಗದಳ್ಳಿ, ಕೋಡ್ಲಿ-ಅಲ್ಲಾಪುರ, ಹುಲ್ಸಗೂಡ, ಮುಕರಂಬಾ, ಚಂದನಕೇರಾ, ಖಾನಾಪುರ, ಐನಾಪುರ ಹಳೆಯ ಮತ್ತು ಐನಾಪುರ ಹೊಸ ಮತ್ತು ನಾಗಾಈದಲಾಯಿ, ದೋಟಿಕೊಳ ಕೆರೆಗಳು ಭರ್ತಿಯಾಗಿವೆ ಎಂದರು.</p>.<p>ಹೂಡದಳ್ಳಿ, ಕೊಳ್ಳೂರು, ಚಿಂದಾನೂರ, ಧರ್ಮಾಸಾಗರ ಕೆರೆಗಳು ಭರ್ತಿಯ ಅಂಚಿನಲ್ಲಿದ್ದು, ರಾಜ್ಯದ ಎರಡನೇ ಅತಿದೊಡ್ಡ ಸಣ್ಣ ನೀರಾವರಿಯ ಸಾಲೇಬೀರನಹಳ್ಳಿ ಕೆರೆ ಭರ್ತಿಗೆ ಕೇವಲ 10 ಅಡಿ ಮಾತ್ರ ಬಾಕಿಯಿದೆ. ಒಟ್ಟು 47 ಅಡಿ ಆಳದ ಕೆರೆಗೆ ಈವರೆಗೆ 37 ಅಡಿ ನೀರು ಹರಿದು ಬಂದಿದೆ. ಅಂತಾವರಂ, ಪಂಗರಗಾ ಕೆರೆಗಳಿಗೂ ಒಳ ಹರಿವು ಹೆಚ್ಚಾಗಿದೆ ಎಂದರು.</p>.<p>ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯ 4 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭರ್ತಿಯಾಗತೊಡಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>